Advertisement

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

06:58 PM Nov 25, 2021 | Team Udayavani |

ನವದೆಹಲಿ: ಸಿಖ್‌ ಧರ್ಮದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದತೆ ಸಮಿತಿ ಸಮನ್ಸ್‌ ನೀಡಿದೆ.

Advertisement

ಡಿ.6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. “ಇಂದಿರಾಗಾಂಧಿಯವರು ಖಲಿಸ್ತಾನಿಗಳನ್ನು ಸೊಳ್ಳೆಗಳಂತೆ ಹೊಸೆದು ಹಾಕಿದ್ದರು’ ಎಂದು ನಟಿ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಸಂದೇಶ ಪೋಸ್ಟ್‌ ಮಾಡಿದ್ದರು. ಇದು ಖಲಿಸ್ತಾನಿಗಳ ಬಗ್ಗೆ ಹೇಳಿರುವ ಹೇಳಿಕೆಯಾಗಿದ್ದು, ನಟಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಅನೇಕ ದೂರುಗಳು ಬಂದಿರುವುದಾಗಿ ಸಮಿತಿ ತಿಳಿಸಿದೆ.

ಇದೇ ವಿಚಾರದಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿ ನಟಿಯ ವಿರುದ್ಧ ಎಫ್ಐಆರ್‌ ಕೂಡ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next