Advertisement

ಬೆಳ್ತಂಗಡಿ: ಕಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಹೃದಯಾಘಾತದಿಂದ ನಿಧನ

12:02 PM Nov 01, 2021 | Team Udayavani |

ಬೆಳ್ತಂಗಡಿ: ತಾಲೂಕಿನ ಊರುವಾಲು ಗ್ರಾಮದ ಬೆಂಗಾಯಿ ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷರಾದ ಸುನಿಲ್ ಸಾಲಿಯಾನ್ ನ.1ರಂದು ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಮುಂಜಾನೆ 3 ಗಂಟೆಗೆ ನಿಧನ ಹೊಂದಿದ ಘಟನೆ ನಡೆದಿದೆ.

ಇದನ್ನೂ ಓದಿ: ಬಂಟ್ವಾಳ: ರಾ.ಹೆ.75 ರಲ್ಲಿ ಕಂಟೈನರ್ ಹಾಗೂ ಬೈಕ್ ಢಿಕ್ಕಿ ; ಬೈಕ್ ಸವಾರ ಸಾವು

ಅವರು ಮಾಜಿ ಪಂಚಾಯತ್ ಅಧ್ಯಕ್ಷರಾಗಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾಗಿ ಸಮಾಜ ಸೇವೆಯಲ್ಲಿ ಅಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಅವರು ಪತ್ನಿ ಪುತ್ರಿ, ಪುತ್ರನನ್ನು ಅಗಲಿದ್ದಾರೆ.

Advertisement

 

 

 

Advertisement

Udayavani is now on Telegram. Click here to join our channel and stay updated with the latest news.

Next