Advertisement

ಕಾಣಿಯೂರು: ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ

11:45 PM Feb 28, 2023 | Team Udayavani |

ಕಾಣಿಯೂರು: ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಫೆ. 25ರಂದು ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಎಂಬಲ್ಲಿ ನಡೆದಿದೆ.

Advertisement

ಗದಗ ಜಿಲ್ಲೆಯ ಗೋವಿಂದ (55) ಮೃತ ವ್ಯಕ್ತಿ. ಆತನನ್ನು ಕೃಷಿ ಹಾಗೂ ಕೋಳಿ ಫಾರಂ ನೋಡಿಕೊಳ್ಳಲು ನೇಮಿಸಿಕೊಂಡಿದ್ದು, ಆರು ತಿಂಗಳಿನಿಂದ ಕೆಲಸ ಮಾಡುತಿದ್ದು ಫೆ. 21ರಂದು ಗೋವಿಂದ ಊರಿಗೆ ಹೋಗುವುದಾಗಿ 5000 ರೂ. ಪಡೆದಿದ್ದಾರೆ.

ಫೆ. 25ರಂದು ಸತ್ಯಪ್ರಸಾದ್‌ ಅವರು ತಮ್ಮ ಕೃಷಿ ತೋಟಕ್ಕೆ ನೀರು ಬಿಡಲು ತೋಟಕ್ಕೆ ಹೋದಾಗ ವಾಸನೆ ಬರುತ್ತಿದ್ದು ಹತ್ತಿರ ಹೋಗಿ ನೋಡಿದಾಗ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಕಂಡು ಬಂತು. ಪರಿಶೀಲಿಸಿದಾಗ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಗೋವಿಂದನ ಮೃತದೇಹ ಎಂಬುದು ತಿಳಿಯಿತು.

ಮೃತ ಗೋವಿಂದ ಯಾವುದೋ ವಿಷಪದಾರ್ಥ ಸೇವನೆ ಮಾಡಿಯೋ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರಬಹುದೆಂದು ಸಂಶಯಿಸಲಾಗಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next