Advertisement

ಕಾಣಿಯೂರಿನಲ್ಲಿ ಅಡಿಕೆ, ಸಿಲಿಂಡರ್ ಕಳವು : ನಿರಂತರವಾಗಿ ಕಳ್ಳತನ ನಡೆದರೂ ಪತ್ತೆಯಾಗದ ಕಳ್ಳರು

12:04 PM Mar 24, 2022 | Team Udayavani |

ಕಾಣಿಯೂರು : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ. ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು 2 ಕ್ವಿಂಟಲ್ ಅಡಿಕೆ ಕಳ್ಳತನವಾಗಿದೆ ಎಂದು ತಿಳಿಸಿದ್ದಾರೆ.

Advertisement

ಅಲ್ಲದೇ ಪಕ್ಕದ ಪೂರ್ವೋದಯ ಸರ್ವೀಸ್ ಸ್ಟೇಷನ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಾಣಿಯೂರು ಪೇಟೆಯಲ್ಲಿ ಹಲವು ವರ್ಷದಿಂದ ನಿರಂತರವಾಗಿ ಸರಣಿ ಕಳ್ಳತನ ನಡೆಯುತ್ತಿದೆ. ಅಡಿಕೆ ಅಂಗಡಿ, ಜನರಲ್ ಸ್ಟೋರ್ ಹೀಗೆ ಲಕ್ಷಾಂತರ ರೂಪಾಯಿಯ ಅಡಿಕೆ, ಹಣ ಕಳ್ಳತನ ನಡೆದಿದೆ. ಅಲ್ಲದೇ ಕೆಲದಿನಗಳ ಹಿಂದೆ ಹಾಡು ಹಗಲೇ ಡ್ರವರ್‌ನಿಂದ ಹಣ ಕಳ್ಳತನವಾದ ಘಟನೆಯೂ ನಡೆದಿದ್ದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ

ಇದನ್ನೂ ಓದಿ : ಉಕ್ರೇನ್‌ನಲ್ಲಿ 7,000 ರಿಂದ 15,000 ರಷ್ಯಾದ ಸೈನಿಕರು ಹತ್ಯೆಗೀಡಾಗಿದ್ದಾರೆ: ನ್ಯಾಟೋ

Advertisement

Udayavani is now on Telegram. Click here to join our channel and stay updated with the latest news.

Next