Advertisement

ಮೊದಲು ಕಾಂಗ್ರೆಸ್ ತೊಡೆದು ಹಾಕಬೇಕು : ನಟ ಚೇತನ್

02:16 PM Sep 10, 2021 | Team Udayavani |

ಬೆಂಗಳೂರು :  ಕಾಂಗ್ರೆಸ್ ಮತ್ತು ಆರ್ ಎಸ್ ಎಸ್ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ ಎಸ್ ಎಸ್, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕೆಂದು ಚಿತ್ರನಟ ಹಾಗೂ ಹೋರಾಟಗಾರ ಚೇತನ್ ಕುಮಾರ್ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಕಾಂಗ್ರೆಸ್ ಮತ್ತು ಬಿಜೆಪಿ, ಎರಡನ್ನೂ ಮಣಿಸಬೇಕು – ಹೇಗೆ? ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್.ಎಸ್.ಎಸ್ಸನ್ನು ಸ್ಥಾಪಿಸಿದರು. ಕಾಂಗ್ರೆಸ್ ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next