Advertisement

ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ‘ಡಿ ಬಾಸ್’ ದರ್ಶನ್

01:26 PM Aug 09, 2021 | Team Udayavani |

ಸಿನಿಮಾ ಚಿತ್ರೀಕರಣಗಳಿಗೆ ಕೊಂಚ ಬ್ರೇಕ್ ಹಾಕಿರುವ ಸ್ಯಾಂಡಲ್ವುಡ್ ಡಿ ಬಾಸ್ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚಿಗಷ್ಟೆ ಕೇರಳದ ಶನಿದೇವರ ದೇವಸ್ಥಾನಕ್ಕೆ ತೆರಳಿದ್ದ ದರ್ಶನ್, ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Advertisement

ದರ್ಶನ್ ಅವರ ಜೊತೆ ಮಂಡ್ಯ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ತಿರುಮಲನ ಸನ್ನಿಧಾನಕ್ಕೆ ತೆರಳಿದ್ದಾರೆ.

ದರ್ಶನ್ ಅವರು ಇಂದು ಬೆಳಗ್ಗೆ ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನ ಪಡೆದಿರುವ ಫೋಟೋಗಳು  ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ

‘ರಾಬರ್ಟ್’ ಚಿತ್ರದ ಬಿಡುಗಡೆಗೆ ಮುಂಚೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ತಿರುಪತಿಗೆ ಭೇಟಿ ನೀಡಿದ್ದರು. ಮಾರ್ಚ್ 11 ರಂದು ರಾಬರ್ಟ್ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಬೇಕಿತ್ತು. ಅದಕ್ಕೂ ಮುಂಚೆ ಫೆಬ್ರವರಿ ತಿಂಗಳಲ್ಲಿ ಚಾಲೆಂಜಿಂಗ್ ಸ್ಟಾರ್ ತಿರುಪತಿ ಭೇಟಿ ನೀಡಿದ್ದರು.

ಇನ್ನು ಆಗಸ್ಟ್ 11 ರಂದು ಡಿ ಬಾಸ್ ಕನ್ನಡ ಚಿತ್ರರಂಗದಲ್ಲಿ 24 ವರ್ಷ ಪೂರೈಸಲಿದ್ದಾರೆ. ಈ ಹಿನ್ನೆಲೆ ಆಗಸ್ಟ್ 10 ರಂದು ಸಂಜೆ ಆರು ಗಂಟೆಗೆ ಅಭಿಮಾನಿಗಳ ಫ್ಯಾನ್ಸ್ ಖಾತೆಗಳಲ್ಲಿ ದರ್ಶನ್ ಅವರ ಕಾಮನ್ ಡಿಪಿ ಬಿಡುಗಡೆ ಮಾಡಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next