Advertisement

ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಕನ್ನಡದ ಹಿರಿಯ ನಟ ಸಿದ್ದರಾಜ್ ಕಲ್ಯಾಣ್ ಕರ್ ಇನ್ನಿಲ್ಲ

04:32 PM Sep 08, 2020 | keerthan |

ಬೆಂಗಳೂರು: ಕನ್ನಡ ಧಾರವಾಹಿ ಮತ್ತು ಹಲವಾರು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಸಿದ್ದರಾಜ್ ಕಲ್ಯಾಣ್ ಕರ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ಧಾರವಾಹಿಯೊಂದರಲ್ಲಿ ನಟಿಸುತ್ತಿದ್ದ ಸಿದ್ದರಾಜ್ ಅವರು ನಿನ್ನೆಯಷ್ಟೇ ( ಸೆ.7) ಹುಟ್ಟುಹಬ್ಬ ಆಚರಿಸಿದ್ದರು. ಧಾರವಾಹಿ ಸೆಟ್ ನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಅವರು ರಾತ್ರಿಯವರೆಗೂ ಆರಾಮವಾಗಿಯೇ ಇದ್ದರು. ಆದರೆ ತಡರಾತ್ರಿ ಹೃದಯಾಘಾತದಿಂದ ಅವರು ಅಸುನೀಗಿದ್ದಾರೆ.

ಹುಬ್ಬಳ್ಳಿಯ ನವನಗರ ನಿವಾಸಿಯಾಗಿರುವ ಇವರಿಗೆ 60 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಪುತ್ತರನ್ನು ಅಗಲಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ನಟಿ ಸಂಜನಾ ಗಲ್ರಾನಿ ಬಂಧನ

ರಂಗಭೂಮಿಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಸಿದ್ದರಾಜ್ ಅವರು ಯಾರೆ ನೀ ಅಭಿಮಾನಿ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ಶ್ರೀ ಮಂಜುನಾಥ, ಸೂಪರ್, ಬುದ್ಧಿವಂತ, ಹೃದಯ ಹೃದಯ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು.

Advertisement

ಕಿರುತೆರೆಯಲ್ಲೂ ಸಾಕಷ್ಟು ಹೆಸರು ಮಾಡಿದ್ದ ಸಿದ್ದರಾಜ್ ಅವರು ಹಲವಾರು ಧಾರವಾಹಿಗಳಲ್ಲಿ ನಟಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next