Advertisement

ಹುಟ್ಟು ಹಬ್ಬಕ್ಕೆ ಕೋಣ ಬಲಿ : ಅಭಿಮಾನಿಗಳ ಕೃತ್ಯಕ್ಕೆ ಸುದೀಪ್ ಬೇಸರ

09:19 PM Sep 02, 2021 | Team Udayavani |

ಬೆಂಗಳೂರು : ತಮ್ಮ ಹುಟ್ಟು ಹಬ್ಬದ ನಿಮಿತ್ತ ಪ್ರಾಣಿ ಬಲಿ ನೀಡಿದ ಅಭಿಮಾನಿಗಳ ಕೃತ್ಯಕ್ಕೆ ನಟ ಸುದೀಪ್ ಅವರು ಅಸಮಾಧಾನಗೊಂಡಿದ್ದಾರೆ.

Advertisement

ಇಂದು (ಸೆ.02) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿಯಲ್ಲಿ ಸಾರ್ವಜನಿಕವಾಗಿ ಕೋಣ ಬಲಿಕೊಟ್ಟಿದ್ದಾರೆ.

ಅಭಿಮಾನಿಗಳ ಈ ಹುಚ್ಚಾಟಕ್ಕೆ ಸುದೀಪ್ ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿಗಳ ಹೆಸರಲ್ಲಿ ಈ ರೀತಿ ಪ್ರಾಣಿ ಹಿಂಸೆ ಮಾಡುವುದು ಸರಿಯಲ್ಲ. ನನಗೆ ನಿಮ್ಮ ಪ್ರೀತಿ ಮಾತ್ರ ಸಾಕು ಎಂದು ಅಭಿಮಾನಿಗಳಿಗೆ ಬುದ್ಧಿಮಾತು ಹೇಳಿದ್ದಾರೆ ಸುದೀಪ್.

ಇನ್ನು ಪ್ರತಿ ವರ್ಷ ಸುದೀಪ್ ಅವರನ್ನು ನೋಡೋಕೆ ಬೇರೆಬೇರೆ ಊರುಗಳಿಂದ ಬೆಂಗಳೂರಿಗೆ ಅಭಿಮಾನಿಗಳು ಆಗಮಿಸುತ್ತಿದ್ದರು. ಆದರೆ, ಕೊವಿಡ್​ ಕಾರಣದಿಂದ ಇದಕ್ಕೆ ಬ್ರೇಕ್​ ಬಿದ್ದಿದೆ. ಹೀಗಾಗಿ, ತಮ್ಮತಮ್ಮ ಊರುಗಳಲ್ಲೇ ಅಭಿಮಾನಿಗಳು ಕಿಚ್ಚನ ಬರ್ತ್​​ಡೇ ಆಚರಿಸಿದ್ದಾರೆ. ಸಾಮಾನ್ಯವಾಗಿ ಬರ್ತ್​ಡೇ ದಿನ ಕೇಕ್​ ಕತ್ತರಿಸಲಾಗುತ್ತದೆ. ಕೆಲವೆಡೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಕೆಲವರು ಕಿಚ್ಚನ ಜನ್ಮದಿನದಂದು ರಕ್ತದಾನ ಶಿಬಿರ ಕೂಡ ನಡೆಸಿದ್ದಾರೆ. ಆದರೆ, ತಾಲೂಕಿನ ಬಂಡ್ರಿಯಲ್ಲಿ ಸಾರ್ವಜನಿಕವಾಗಿ ಕೋಣ ಬಲಿಕೊಟ್ಟಿದ್ದಾರೆ. ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಮಾಡಿ ವಿಕೃತಿ ಮೆರೆದಿರುವುದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next