Advertisement

ಹಿರಿಯ ಪತ್ರಕರ್ತ–ಸಿನಿಮಾ ನಟ ಸುರೇಶ್ ಚಂದ್ರ ಇನ್ನಿಲ್ಲ

02:29 PM Jun 11, 2021 | Team Udayavani |

ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಹಾಗೂ ಚಿತ್ರನಟ ಸುರೇಶ್​ಚಂದ್ರ ಅವರು ಇಂದು ( ಜೂನ್ 1) ಮಧ್ಯಾಹ್ನ ಮೃತ ಪಟ್ಟಿದ್ದಾರೆ.

Advertisement

ಇತ್ತೀಚಿಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್​ಚಂದ್ರ ಅವರು ಚಂದನವನದ ಶಂಕರ್​ನಾಗ್​, ವಿಷ್ಣುವರ್ಧನ್​, ಅಂಬರೀಶ್​, ದೇವರಾಜ್​ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ನಟ, ನಿರ್ದೇಶಕ ಎಸ್​.ನಾರಾಯಣ್​ ಅವರ ಆಹ್ವಾನದ ಮೇರೆಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಪೋಷಕ ನಟರಾಗಿ ತೆರೆ ಮೇಲೆ ಕಾಣಿಸಿಕೊಂಡ ಸುರೇಶ್​ಚಂದ್ರ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಸಂಜೆವಾಣಿ ಪತ್ರಿಕೆಯಲ್ಲಿ ಸುದೀರ್ಘವಾಗಿ ಕೆಲಸ ನಿರ್ವಹಿಸಿದ್ದ ಅವರು ಕಳೆದ ವರ್ಷ ನಿವೃತ್ತಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next