Advertisement

ಅನುಶ್ರಿ ಹೆಸರು ಕೈಬಿಟ್ಟಿರೋದರ ಹಿಂದೆ ಪ್ರಭಾವ ಇದೆ ಅಂತ ನನಗನ್ನಿಸಲ್ಲ : ಸಚಿವ ಮಾಧುಸ್ವಾಮಿ

05:41 PM Sep 09, 2021 | Team Udayavani |

ಹಾಸನ: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಅವರ ಹೆಸರು ತಳುಕು ಹಾಕಿಕೊಂಡಿದ್ದರು. ಪೊಲೀಸರು ಆಕೆಯ ಹೆಸರನ್ನು ಕೈ ಬಿಟ್ಟಿದ್ದೇಕೆ ಎಂಬುದರ ಕುರಿತು ಸಚಿವ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Advertisement

ಇಂದು (ಸೆ.09) ಮಾಧ್ಯಮಗಳ ಎದುರು ಈ ಬಗ್ಗೆ ಮಾತನಾಡಿರುವ ಅವರು, ‘ಪೊಲೀಸರಿಗೆ ತನಿಖೆ ಹೀಗೆ ಮಾಡಿ, ಹಾಗೆ ಮಾಡಿ ಎಂದು ಹೇಳಲು ಆಗಲ್ಲ. ಅವರನ್ನ ಇವರನ್ನ ಫಿಕ್ಸ್ ಮಾಡಿ ಎಂದು ನಾವ್ಯಾರೂ ಹೇಳಲು ಆಗಲ್ಲ. ಸಾಕ್ಷ್ಯಾಧಾರ ಇಲ್ಲದೆ ಹಿನ್ನೆಲೆ ಅನುಶ್ರೀ ಹೆಸರು ಬಿಟ್ಟಿದ್ದೇವೆ ಅಂತ ಕಮಿಷನರ್ ಹೇಳಿದಾರೆ’ ಎಂದು ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.

‘ಪೊಲೀಸರಿಗೆ ತನಿಖೆ ಹೀಗೆ ಮಾಡಿ, ಹಾಗೆ ಮಾಡಿ ಎಂದು ಹೇಳಲು ಆಗಲ್ಲ. ಅವರನ್ನ ಇವರನ್ನ ಫಿಕ್ಸ್ ಮಾಡಿ ಎಂದು ನಾವ್ಯಾರೂ ಹೇಳಲು ಆಗಲ್ಲ. ಅವರು ಕೋರ್ಟ್ ಮುಂದೆ ಏನು ಹೇಳ್ತಾರೋ ಅದರ ಮೇಲೆ ವಿಚಾರಣೆ ನಡೆಯುತ್ತೆ. ಅನುಶ್ರಿ ಹೆಸರು ಕೈಬಿಟ್ಟಿರೋದರ ಹಿಂದೆ ಪ್ರಭಾವ ಇದೆ ಅಂತ ನನಗನ್ನಿಸಲ್ಲ’ ಎಂದು ಮಧುಸ್ವಾಮಿ ಹೇಳಿದ್ದಾರೆ.

‘ಚಾರ್ಜ್ ಶೀಟ್​ನಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದಾರೆ ಅಂತ ನಾವು ಮೂರನೆಯವರು ಹೇಗೆ ಹೇಳೋದು? ಪೊಲೀಸರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಹೆಸರು ಬಿಟ್ಟಿದಾರೆ ಎಂದಾದರೆ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬಹುದು. ನಾರ್ಕೊಟಿಕ್ ಕೇಸ್​ನಲ್ಲಿ ಪೊಲೀಸರು ಹೀಗೆ ಪ್ರಭಾವದಿಂದ ಹೆಸರು ಕೈಬಿಡ್ತಾರೆ ಅಂತ ನಾನಂದುಕೊಂಡಿಲ್ಲ. ಜನ ಏನೇನೋ‌ ಮಾತಾಡ್ತಾರೆ. ಒಬ್ಬೊಬ್ಬರಿಗೆ ಒಂದೊಂದು ರೀತಿ ಅನ್ನಿಸುತ್ತೆ. ಪ್ರಭಾವ ಇದೆ ಅಂತ ಸುಮ್ಮಸುಮ್ಮನೇ ಚಾರ್ಜ್ ಶೀಟ್​ನಲ್ಲಿ ತರೋಕೆ ಆಗಲ್ಲ’ ಎಂದು ಮಾಧುಸ್ವಾಮಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next