Advertisement

ಶಾರುಖ್ ಪುತ್ರ ಆರ್ಯನ್ ಖಾನ್ ಬಂಧನ ಪ್ರಶ್ನಿಸಿದ ನಟಿ ರಮ್ಯಾ

05:33 PM Oct 06, 2021 | Team Udayavani |

ಬೆಂಗಳೂರು: ನಾಲ್ವರು ರೈತರ ಹತ್ಯೆ ಮಾಡಿದ ಆರೋಪ ಹೊತ್ತಿರುವ ಸಚಿವರ ಪುತ್ರ ಅರಾಮ್ ಆಗಿ ಹೊರಗೆ ತಿರುಗುತ್ತಿದ್ದಾನೆ. ಡ್ರಗ್ಸ್ ಸೇವನೆ ಆರೋಪದಲ್ಲಿ ಆರ್ಯನ್ ಖಾನ್ ಬಂಧನವಾಗಿದೆ. ಮೃತ ರೈತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಹೊರಟ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸುತ್ತಾರೆ. ಇದು ನವ ಭಾರತ ಎಂದು ಚಿತ್ರನಟಿ ಹಾಗೂ ಮಾಜಿ ಎಂಪಿ ರಮ್ಯಾ ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

Advertisement

ಇಂದು ಸೋಷಿಲ್ ಮೀಡಿಯಾದಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ರಮ್ಯಾ, ‘ಆರ್ಯನ್ ಖಾನ್ ಬಳಿ ಡ್ರಗ್​ ಇರಲಿಲ್ಲ ಮತ್ತು ಅವರು ಡ್ರಗ್ಸ್​​ ಸೇವಿಸಿದ ಬಗ್ಗೆ ದಾಖಲೆ ಇಲ್ಲ. ಆದಾಗ್ಯೂ, ಅವರ ಬಂಧನ ನಡೆದಿದೆ. ಮತ್ತೊಂದೆಡೆ ಬಿಜೆಪಿ ಸಚಿವರ ಮಗನಿದ್ದಾನೆ. ಅವರು 4 ರೈತರನ್ನು ಕೊಂದಿದ್ದಾರೆ, ಆದರೆ ಬಂಧನ ಮಾತ್ರ ಆಗಿಲ್ಲ. ಮೃತ ರೈತರ ಕುಟುಂಬವನ್ನು ಪ್ರಿಯಾಂಕಾ ಗಾಂಧಿ ಭೇಟಿ ಮಾಡಲು ಹೊರಟಾಗ ನೀವು ಅವರನ್ನು ಬಂಧಿಸಿದ್ದೀರಿ. ಇದು ಹೊಸ ಭಾರತ. ಅಧಿಕಾರದಲ್ಲಿರುವ ಹುಚ್ಚಾಟಿಕೆಯಿಂದ ದೇಶ ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಆರ್ಯನ್ ಖಾನ್ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಆದಾಗ್ಯೂ ಅವರನ್ನು ವಶಕ್ಕೆ ಪಡೆದಿದೆ. ನ್ಯಾಯಾಲಯದಲ್ಲಿ ವಾಟ್ಸಾಪ್ ಚಾಟ್‌ಗಳನ್ನು ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ. ಇನ್ನು, ವಿಚಾರಣೆ ವೇಳೆ ಆರ್ಯನ್​ ಅವರು ಹೇಳಿದ್ದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಎನ್​ಸಿಬಿ ಹೇಳುತ್ತಿದೆ. ಇದರ ಜತೆಗೆ ಹೊರಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದೂ ಹೇಳುತ್ತಿದೆ. ವಿಚಾರಣೆ ವೇಳೆ ದೀಪಿಕಾ ಪಡುಕೋಣೆ ಸಾಕಷ್ಟು ಬಾರಿ ಅತ್ತರು, ಆರ್ಯನ್​ ಖಾನ್​ ಅತ್ತಿದ್ದಾರೆ ಎಂಬಿತ್ಯಾದಿ ಗಾಸಿಪ್​ ಹರಡೋದು ಅವರಿಗೆ ಇಷ್ಟ ಎನಿಸುತ್ತದೆ. ಪ್ರಶ್ನೆ ಮಾಡುವಾಗ ಅಲ್ಲಿ ಯಾರೂ ಇರುವುದಿಲ್ಲ. ಆದಾಗ್ಯೂ ಇದು ಮಾಧ್ಯಮಗಳಿಗೆ ಹೇಗೆ ಸಿಕ್ಕಿತು?’ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next