Advertisement

ರಸ್ತೆ ದುರಸ್ತಿಗೆ ಒತ್ತಾಯಿಸಿ ಕನ್ನಡ ಸೇನೆ ಪ್ರತಿಭಟನೆ

03:00 PM Oct 01, 2019 | Team Udayavani |

ಗಂಗಾವತಿ: ತಾಲೂಕಿನ ಶ್ರೀ ರಾಮನಗರದಿಂದ ಕೋಟಯ್ಯ ಕ್ಯಾಂಪ್‌ ಮೂಲಕ ಕನಕಗಿರಿ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಹದಗೆಟ್ಟಿದ್ದು, ಹಲವು ದಿನಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

Advertisement

ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಕನ್ನಡ ಸೇನೆ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಶಾಸಕರು, ಸಂಸದರವಿರುದ್ಧ ಘೋಷಣೆ ಕೂಗಿದರು. ಸಂಘಟನೆಯ ಮುಖಂಡ ಭಾಸ್ಕರರೆಡ್ಡಿ ಮಾತನಾಡಿ, ಈ ರಸ್ತೆ ಶ್ರೀ ರಾಮನಗರ ಮತ್ತು ಕನಕಗಿರಿಗೆ ಸಂಪರ್ಕ ಕಲ್ಪಿಸುತ್ತದೆ. ಹಲವು ವರ್ಷಗಳಿಂದ ಹದಗೆಟ್ಟ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಿಸಬೇಕು. ಈ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆ, ಶಾಲಾ-ಕಾಲೇಜು ಹಾಗೂ ಹತ್ತು ಹಲವು ಹಳ್ಳಿಗಳಿದ್ದು ಜನ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next