Advertisement

Kannada Cinema; ಬರಲಿದೆ ಮೆಜೆಸ್ಟಿಕ್-2; ಭರತ್ ಗೆ ಜೋಡಿಯಾಗಿ ಸಂಹಿತಾ ವಿನ್ಯಾ

05:36 PM Feb 23, 2024 | Team Udayavani |

“ಮೆಜೆಸ್ಟಿಕ್‌’ ಚಿತ್ರ ನಟ ದರ್ಶನ್‌ ಅವರಿಗೆ ಬ್ರೇಕ್‌ ನೀಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ “ಮೆಜೆಸ್ಟಿಕ್‌-2′ ಎಂಬ ಸಿನಿಮಾವೊಂದು ಬರುತ್ತಿದೆ. ರಾಮು ಈ ಚಿತ್ರದ ನಿರ್ದೇಶಕರು. ಶಿವರಾತ್ರಿ ವೇಳೆಗೆ ಸಿನಿಮಾ ಸೆಟ್ಟೇರಲಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್‌ ಅವರ ಪುತ್ರ ಭರತ್‌ ನಾಯಕ ನಟರಾಗಿ ಎಂಟ್ರಿಕೊಡುತ್ತಿದ್ದಾರೆ. ಚಿತ್ರದುರ್ಗ ಮೂಲದ ಟಿ. ಆನಂದಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಶಕಗಳಿಂದಲೂ ತಂತ್ರಜ್ಞನಾಗಿ ಕೆಲಸ ಮಾಡುತ್ತಿರುವ ರಾಮು ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

Advertisement

ನಿರ್ಮಾಪಕ ಆನಂದಪ್ಪ ಮಾತನಾಡಿ, “ನಾನು ಈ ಹಿಂದೆ ಪಿಂಕ್‌ ನೋಟ್‌ ಎಂಬ ಚಿತ್ರವನ್ನು ಆರಂಭಿಸಿದ್ದೆ.ಅದಾಗಲೇ 90ರಷ್ಟು ಮುಗಿದಿದೆ. ಇದು ಎರಡನೇ ಚಿತ್ರ. ಸ್ನೇಹಿತ ರಾಮು ಬಹಳ ದಿನಗಳಿಂದ ಈ ಕಥೆ ಚೆನ್ನಾಗಿದೆ ನೋಡಿ ಅಂತ ಹೇಳ್ತಾ ಇದ್ದರು, ಒಮ್ಮೆ ಕಥೆ ಕೇಳಿದೆ, ಇಷ್ಟವಾಯ್ತು, ಜನ ನಮ್ಮ ಸಿನಿಮಾ ನೋಡಿ ಅದರಲ್ಲಿ ಏನಾದರೂ ಆಯ್ಕೆ ಮಾಡಿಕೊಳ್ಳಬೇಕು. ಅಂಥ ಸಿನಿಮಾ ಮಾಡಿ ಎಂದೆ, ನಾವೆಲ್ಲ ಸೇರಿ ಒಳ್ಳೇ ಚಿತ್ರ ಮಾಡುತ್ತಿದ್ದೇವೆ’ ಎಂದರು.

ಶಿಲ್ಪಾ ಶ್ರೀನಿವಾಸ್‌ ಕೂಡಾ ಮಗನಿಗೆ ಪ್ರೋತ್ಸಾಹ ನೀಡುವಂತೆ ಕೇಳಿಕೊಂಡರು. ನಿರ್ದೇಶಕ ರಾಮು ಮಾತನಾಡಿ, “ನಾನು ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್‌ನಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದಾಗಲೇ ಈ ಟೈಟಲ್‌ ಹೊಳೆದಿತ್ತು, ಮೆಜೆಸ್ಟಿಕ್‌ ಸಿನಿಮಾ ನನ್ನ ಕನಸು, ಅದೀಗ ನನಸಾಗುತ್ತಿದೆ’ ಎಂದರು.

“ಈ ಕಥೆ, ಟೈಟಲ್‌ ಹೇಳಿದಾಗ ತುಂಬಾ ಖುಷಿಯಾಯ್ತು. ನಾನು ದರ್ಶನ್‌ ಅವರ ಅಭಿಮಾನಿ. ಅವರು ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂದರ್ಭದಲ್ಲಿ ನಮ್ಮ ಸಿನಿಮಾ ಲಾಂಚ್‌ ಆಗ್ತಿದೆ. ಅವರ 1% ಆದರೂ ನಮಗೆ ಬಂದರೆ ಸಾಕು. ಮರಿದಾಸನ ಪಾತ್ರಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ’ ಎಂದರು. ಚಿತ್ರಕ್ಕೆ ಸಂಹಿತಾ ವಿನ್ಯಾ ನಾಯಕಿ.

Advertisement

Udayavani is now on Telegram. Click here to join our channel and stay updated with the latest news.

Next