Advertisement

ಡಬ್ಬಿಂಗ್ ಮುಗಿಸಿದ ಪೃಥ್ವಿ ಅಂಬರ್‌ ನಟನಯ ‘ದೂರದರ್ಶನ’

02:38 PM Sep 11, 2022 | Team Udayavani |

ಹೊಸಬರೇ ಸೇರಿ ಮಾಡಿರುವ “ದೂರದರ್ಶನ’ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್‌ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್‌ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

Advertisement

ಪೃಥ್ವಿ ಅಂಬರ್‌ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್‌ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್‌ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್‌, ಸೂರಜ್‌ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರು ತಾರಾಗಣ ಸಿನಿಮಾದಲ್ಲಿದೆ.

ಇದನ್ನೂ ಓದಿ:ವಿಲಿಯಮ್ಸನ್ ನಾಯಕತ್ವ ಸಾಕು..: ಕಿವೀಸ್ ನಲ್ಲೂ ಕ್ಯಾಪ್ಟನ್ ಬದಲಾವಣೆ ಕೂಗು

ಈಗಾಗಲೇ ಶೂಟಿಂಗ್‌ ಪೂರ್ಣಗೊಳಿಸಿರುವ ಸಿನಿಮಾವನ್ನು ರಾಜೇಶ್‌ ಭಟ್‌ ನಿರ್ಮಾಣ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಉಗ್ರಂ ಮಂಜು ಜವಾಬ್ದಾರಿ ಹೊತ್ತಿದ್ದು, ಅರುಣ್‌ ಸುರೇಶ್‌ ಛಾಯಾಗ್ರಹಣ, ವಾಸುಕಿ ವೈಭವ ಸಂಗೀತ, ಪ್ರದೀಪ್‌ ಆರ್‌. ರಾವ್‌ ಸಂಕಲನ, ನಂದೀಶ್‌ ಸಂಭಾಷಣೆ ಸಿನಿಮಾಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next