Advertisement

ದೇಗುಲಗಳಲ್ಲಿ ಸಂಸ್ಕೃತ ಜತೆ ಕನ್ನಡ ಮಂತ್ರಘೋಷ!

05:53 PM Dec 01, 2020 | Suhan S |

ಚಾಮರಾಜನಗರ: ಜಿಲ್ಲೆಯ ದೇವಾಲಯಗಳಲ್ಲಿ ಕನ್ನಡದಲ್ಲೇ ಮಂತ್ರಘೋಷ ಮಾಡುವ ಸಲುವಾಗಿಅರ್ಚಕರಿಗೆ ಕನ್ನಡ ಮಂತ್ರಗಳನ್ನು ಹೇಳಿಕೊಡುವ ವಿಶಿಷ್ಟ ಕಾರ್ಯಾಗಾರ ನಗರದಲ್ಲಿ ಸೋಮವಾರ ನಡೆಯಿತು.

Advertisement

ತನ್ಮೂಲಕ ಇನ್ನು ಮುಂದೆ ಜಿಲ್ಲೆಯ ದೇವಾ ಲಯಗಳಲ್ಲಿ ಸಂಸ್ಕೃತದೊಂದಿಗೆ ಕನ್ನಡ ಮಂತ್ರ ಘೋಷಗಳು ಮೊಳಗಲಿವೆ. ಜಿಲ್ಲಾಡಳಿತ, ಮುಜರಾಯಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಜೆ. ಎಚ್‌. ಪಟೇಲ್‌ ಸಭಾಂಗಣದಲ್ಲಿ ಅರ್ಚಕರಿಗೆಕನ್ನಡದಲ್ಲೇ ದೇವರ ಪೂಜೆ, ಮಂತ್ರಘೋಷ, ವಿಧಿವಿಧಾನಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಚಾಲನೆ ನೀಡಿದರು.

ಕನ್ನಡ ಮಂತ್ರ: ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಅರ್ಥವಾಗುವ ಕನ್ನಡ ಭಾಷೆಯಲ್ಲಿ ಮಂತ್ರೋಚ್ಛಾರ ನಡೆಯಬೇಕೆಂಬುದು, ಸಾಹಿತಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಎಂ. ಆರ್‌. ರವಿ ಅವರ ಇಚ್ಛೆಯಾಗಿತ್ತು. ಇದನ್ನು ಜಾರಿಗೊಳಿಸುವ ಸಲುವಾಗಿ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಕನ್ನಡದಲ್ಲಿ ಮಂತ್ರ ಹೇಳುವ ವಿಧಾನಗಳನ್ನು ತಿಳಿಸಿಕೊಡುವ ಸಲುವಾಗಿ ಈ ಕಾರ್ಯಾಗಾರವನ್ನು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ ಅವರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಆಯೋಜಿಸಲಾಗಿತ್ತು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಡಾ.ಎಂ. ಆರ್‌. ರವಿ,ಭಕ್ತರಒಳಿತಿಗಾಗಿ, ಸಮಸ್ಯೆಪರಿಹಾರಕ್ಕಾಗಿ ಪೂಜೆ, ಮಂತ್ರ ಘೋಷ ಮಾಡುವ ಪ್ರಕ್ರಿಯೆ ಕನ್ನಡದಲ್ಲೇ ನಡೆದರೆ ಭಕ್ತರ ಮನಸ್ಸಿಗೆ ಪರಿಣಾಮಕಾರಿಯಾಗಿ ತಲುಪುತ್ತದೆ ಎಂಬ ಆಶಯದೊಂದಿಗೆ ಅರ್ಚಕರಿಗಾಗಿ ಹಿರೇಮಗಳೂರು ಕಣ್ಣನ್‌ ಅವರಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದರು.

ಜನರ ಸಹಕಾರ: ಜಿಲ್ಲೆಯ ಜನರು ಪ್ರಬುದ್ದರಾಗಿದ್ದಾರೆ. ಯಾವುದೇ ಉತ್ತಮ ಕಾರ್ಯಗಳಿಗೆ ಜಿಲ್ಲಾಡಳಿತದ ಜೊತೆಗೆ ಟೊಂಕಕಟ್ಟಿ ನಿಲ್ಲುತ್ತಾರೆ.ಕೋವಿಡ್ ವಿರುದ್ಧದ ಹೋರಾಟದಲ್ಲಿಯೂ ಸಹಕರಿಸಿ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆ ಗಮನ ಸೆಳೆಯಲು ಕಾರಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ ಅವರು ಕಾರ್ಯಾಗಾರದಲ್ಲಿ ಕನ್ನಡ ಭಾಷೆಯಲ್ಲೇಅರ್ಚನೆ, ರಾಷ್ಟ್ರಾಶೀರ್ವಾದ, ಮಂಗಳಾರತಿ, ಮತ್ತಿತ್ತರ ಕನ್ನಡ ಮಂತ್ರಗಳನ್ನು ಅರ್ಚಕರಿಗೆ ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ, ಕನ್ನಡಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎಸ್‌.ವಿನಯ್‌,ಹಿರಿಯ ಸಾಹಿತಿ ಕೆ.ವೆಂಕಟರಾಜು, ಹಿಮವದ್‌ಗೋಪಾಲಸ್ವಾಮಿ ಬೆಟ್ಟದ ದೇವಾಲಯದ ಅರ್ಚಕ ಗೋಪಿ, ಚಾಮರಾಜೇಶ್ವರ ದೇವಾಸ್ಥಾನದ ಅರ್ಚಕ ರಾಮಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಸಂಸ್ಕೃತ ಜತೆ ಕನ್ನಡವೂ ಸೇರಿದರೆ ಅರ್ಥಪೂರ್ಣ :  ಮಂತ್ರ ಪಠಣ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ವೇಳೆ ಸಂಸ್ಕೃತದೊಂದಿಗೆ ಕನ್ನಡವೂ ಸೇರಿದರೆ ಅರ್ಥಪೂರ್ಣ ವಾಗಲಿದೆ. ಸರ್ವಜನರ ಒಳಿತಿಗಾಗಿ ನೆರವೇರುವ ಪೂಜಾ ಕೈಂಕರ್ಯ, ಮಂತ್ರಘೋಷಗಳು, ಪ್ರಾರ್ಥನೆ ಸರಳವಾಗಿ ಕನ್ನಡ ದಲ್ಲಿಯೂ ಆಗುವ ಮೂಲಕ ಜನರಿಗೆ ಮುಟ್ಟುವಂತಾಗಲಿ. ಸಂಸ್ಕೃತವನ್ನು ಉಳಿಸಿಕೊಂಡು ಮೂಲ ಉದ್ದೇಶಕ್ಕೆ ಯಾವುದೇ ಧಕ್ಕೆ ಬಾರದ ಹಾಗೇ ಮಾರ್ಗದರ್ಶನ ಮಾಡಿಸುವ ಉದ್ದೇಶದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಡಾ. ರವಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next