Advertisement

ಗೆಲುವಿನ ಹಾದಿಯಲ್ಲಿ ‘13’ ಸಿನಿಮಾ

02:07 PM Sep 21, 2023 | Team Udayavani |

ಕಳೆದ ಶುಕ್ರವಾರ ತೆರೆಕಂಡಿರುವ ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “13′ ಸಿನಿಮಾಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ವಿಷಯವನ್ನು ಹಂಚಿಕೊಳ್ಳಲು ಮತ್ತು ಚಿತ್ರದ ಗೆಲುವಿಗೆ ಕಾರಣರಾದವರಿಗೆ ಧನ್ಯವಾದಗಳನ್ನು ಸಲ್ಲಿಸುವ ಸಲುವಾಗಿ ಚಿತ್ರತಂಡ ಮಾಧ್ಯಮಗಳ ಮುಂದೆ ಬಂದಿತ್ತು.

Advertisement

ಇದೇ ವೇಳೆ ಮಾತನಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್‌, “ನಮ್ಮ ಸಿನಿಮಾದ ಬಗ್ಗೆ ಮಾಧ್ಯಮದವರು ಜನರಿಗೆ ಏನು ತಲುಪಿಸಬೇಕೋ ಅದನ್ನು ತಲುಪಿಸಿದ್ದಾರೆ. ಜನ ಮತ್ತು ಮಾಧ್ಯಮಗಳು ಪ್ರತಿಯೊಬ್ಬರ ಕೆಲಸವನ್ನೂ ಗುರುತಿಸಿದ್ದಾರೆ. ಸಿನಿಮಾವನ್ನು ನೋಡಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದು ಹೇಳಿದರು.

“ಒಂದೊಳ್ಳೆ ಪ್ರಯತ್ನಕ್ಕೆ ಎಲ್ಲ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟೆಕ್ನೀಷಿಯನ್‌ಗಳ ಕೆಲಸವನ್ನು ಗುರುತಿಸಿರುವುದನ್ನು ಕಂಡು ಹೆಮ್ಮೆಯಾಯಿತು’ ಎಂಬುದು ನಿರ್ದೇಶಕ ನರೇಂದ್ರ ಬಾಬು ಮಾತು.

“ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆ ಗಳು ಬಂದಿದೆ. 25 ವರ್ಷಗಳ ನಂತರ ರಾಘಣ್ಣ ಜೊತೆ ಆ್ಯಕ್ಟ್ ಮಾಡಿದ್ದು, ಅದನ್ನು ಜನ ಮೆಚ್ಚಿರುವುದು ನಿಜಕ್ಕೂ ಖುಷಿಯಾಗಿದೆ. ನನ್ನ ಅಭಿನಯಕ್ಕೆ ಸಿಗುತ್ತಿರುವ ಎಲ್ಲ ಕ್ರೆಡಿಟ್‌ ನಿರ್ದೇಶಕರಿಗೆ ಸಲ್ಲಬೇಕು, ಇಡೀ ತಂಡದ ಸಹಕಾರದಿಂದ ಒಂದು ಒಳ್ಳೆಯ ಸಿನಿಮಾ ಮಾಡಲು ಸಾಧ್ಯವಾಯಿತು’ ಎಂದರು ನಟಿ ಶ್ರುತಿ.

ನಿರ್ಮಾಪಕ ಮಂಜುನಾಥ್‌ ಗೌಡ ಮಾತನಾಡಿ, “ರಿವ್ಯೂಸ್‌ ನೋಡಿ ಹೆಚ್ಚು ಹೆಚ್ಚು ಜನ ಥೇಟರಿಗೆ ಬರುತ್ತಿದ್ದಾರೆ. ಹಬ್ಬ ಇದ್ದರೂ ಚಿತ್ರಕ್ಕೆ ಉತ್ತಮ ಕಲೆಕ್ಷನ್‌ ಬರುತ್ತಿದೆ. ಮುಂದಿನ ವಾರದಿಂದ 30 ಥಿಯೇಟರ್‌ ಗಳನ್ನು ಹೆಚ್ಚಿಸುತ್ತಿದ್ದೇವೆ. ಸಿನಿಮಾ ನೋಡಿದವರೆಲ್ಲ ಇಬ್ಬರಿಗಾದರೂ ಹೇಳುತ್ತಿದ್ದಾರೆ. ಹೀಗೆ ಒಬ್ಬರಿಂದ ಮತ್ತೆರಡು ಫ್ಯಾಮಿಲಿ ಸಿನಿಮಾಗೆ ಬರುತ್ತಿದ್ದಾರೆ’ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next