Advertisement

ಮೂಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ ಅವರಿಗೆ ಅದ್ದೂರಿಯ ಸ್ವಾಗತ

02:04 PM Nov 02, 2022 | Team Udayavani |

ಕಾಪು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಿಲಿ ಕೋಲ ನರ್ತಕ ಗುಡ್ಡ ಪಾಣಾರ ಅವರನ್ನು ಬುಧವಾರ ಬೆಳಗ್ಗೆ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮುಂಭಾಗದಲ್ಲಿ ಗ್ರಾಮಸ್ಥರು ವಿಜೃಂಭಣೆಯಿಂದ ಸ್ವಾಗತಿಸಿದರು.

Advertisement

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ನೂರಾರು ಮಂದಿ ಗ್ರಾಮಸ್ಥರು, ಹಿತೈಷಿಗಳು ಬಂಧು ಬಾಂಧವರು ಪಾಲ್ಗೊಂಡಿದ್ದರು.

ಊರಿನ‌ ಹೆಮ್ಮೆಯ ಸಾಧಕ ಗುಡ್ಡ ಪಾಣಾರ ಅವರಿಗೆ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ತದನಂತರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗಿ ಮೂಳೂರು ಮಹಾಲಕ್ಷ್ಮಿ ನಗರದಲ್ಲಿರುವ ಅವರ ಮನೆಯವರೆಗೆ ತೆರೆದ ವಾಹನದಲ್ಲಿ ಸ್ವಾಗತ ಮೆರವಣಿಗೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next