Advertisement

ಚಿತ್ರರಂಗದಿಂದ “ಕನ್ನಡ ರಾಜ್ಯೋತ್ಸವ’ಆಚರಣೆ

12:39 PM Nov 03, 2019 | Lakshmi GovindaRaju |

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದಿಂದ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ವೆಸ್ಟ್‌ ಆಪ್‌ ಕಾರ್ಡ್‌ ರಸ್ತೆಯಲ್ಲಿರುವ ನಿರ್ಮಾಪಕರ ಸಂಘದ ಕಚೇರಿಯಲ್ಲಿ ಸಾ.ರಾ.ಗೋವಿಂದು ಅವರು ಕನ್ನಡ ಬಾವುಟ ಹಾರಿಸುವ ಮೂಲಕ ಕನ್ನಡ ಮಾತೆಯ ಭಾವಚಿತ್ರಕ್ಕೆ ನಮಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ರಾಜ್ಯೋತ್ಸವ ಆಚರಿಸಲಾಯಿತು.

Advertisement

ನಟ ಶ್ರೀಮುರಳಿ ಅವರು ಕನ್ನಡ ಬಾವುಟ ಹಾರಿಸಿದರು. ಈ ವೇಳೆ ಮಂಡಳಿ ಅಧ್ಯಕ್ಷರಾದ ಜೈರಾಜ್‌, ಗಣೇಶ್‌, ಎನ್‌.ಎಂ.ಸುರೇಶ್‌, ಮಾಜಿ ಅಧ್ಯಕ್ಷರಾದ ಎಸ್‌.ಎ.ಚಿನ್ನೇಗೌಡ, ನರಸಿಂಹಲು, ಉಮೇಶ್‌ ಬಣಕಾರ್‌, ನಿರ್ಮಾಪಕರ ಸಂಘದ ಸೂರಪ್ಪ ಬಾಬು, ಭಾ.ಮ.ಹರೀಶ್‌, ನಾಗಣ್ಣ ಸೇರಿದಂತೆ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಶ್ರೀಮುರಳಿ ಅವರನ್ನು ಮಂಡಳಿ ಪದಾಧಿಕಾರಿಗಳು ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next