Advertisement

ಕನ್ನಡ ರಾಜ್ಯೋತ್ಸವ: ಕಲಬುರಗಿಯಲ್ಲಿ ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

09:56 AM Nov 01, 2019 | Mithun PG |

ಕಲಬುರಗಿ: ಜಿಲ್ಲಾದ್ಯಂತ 64ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ನಗರದ ಗಂಜ್ ಪ್ರದೇಶದ ನಗರರೇಶ್ವರ ಶಾಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಧ್ವಜಾರೋಹಣ ನೆರವೇರಿಸಿದರು. ‌

Advertisement

ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿಗಳು, ನಂತರ ರಾಷ್ಟ ಧ್ವಜಾರೋಹಣ ಮಾಡಿದರು. ‌ಡಾ‌.ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳ ಭವ್ಯ ಮೆರವಣಿಗೆ ನಡೆಯಿತು.‌ ಡೊಳ್ಳು ಬಾರಿಸುವ ಮೂಲಕ ಗಣ್ಯರು ಮೆರವಣಿಗೆಗೆ ಚಾಲನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಪಂ ಅಧ್ಯಕ್ಷೆ ಸುವರ್ಣಾ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಜಿಪಂ ಸಿಇಒ ಡಾ.ಪಿ.ರಾಜಾ, ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಎಸ್ಪಿ ವಿನಾಯಕ ಪಾಟೀಲ ಸೇರಿದಂತೆ  ಹಲವು ಗಣ್ಯರು, ಅಧಿಕಾರಿಗಳು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next