Advertisement

ಮೇ 9ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ: ಮೇ 12ರಂದು ಫ‌ಲಿತಾಂಶ

11:58 PM Feb 07, 2021 | Team Udayavani |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಮೇ 9ರಂದು ಚುನಾವಣೆ ನಡೆಯಲಿದೆ. ಮೇ 12ರಂದು ಅಧ್ಯಕ್ಷರ ಚುನಾವಣ ಫ‌ಲಿತಾಂಶ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದ್ದಾರೆ.

Advertisement

ರಾಜ್ಯಾದ್ಯಂತ ಸುಮಾರು 400 ಮತಗಟ್ಟೆಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಮಾ. 29ರಿಂದ ಎ. 7ರ ವರೆಗೆ ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸಲಾಗುವುದು.

ಮೇ 9ರಂದು ಜಿಲ್ಲಾ ಕಸಾಪ ಅಧ್ಯಕ್ಷರ ಫ‌ಲಿತಾಂಶ ಪ್ರಕಟಿಸಲಾಗುವುದು. ಮೇ 11ರಂದು ಗಡಿನಾಡು ಘಟಕಗಳ ಅಧ್ಯಕ್ಷರ ಚುನಾವಣ ಫ‌ಲಿತಾಂಶ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next