Advertisement

ಕನ್ನಡ ಸಂಘ ಪುಣೆ : ವಾರ್ಷಿಕ ಪ್ರತಿಭಾ ಪ್ರದರ್ಶನ

05:13 PM Mar 05, 2019 | |

ಪುಣೆ: ಕನ್ನಡ ಸಂಘ ಪುಣೆ ವತಿಯಿಂದ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡ ವಾರ್ಷಿಕ ಪ್ರತಿಭಾ ಪ್ರದರ್ಶನವನ್ನು ಮಾ. 1ರಂದು ಸಂಘದ ಡಾ| ಕಲ್ಮಾಡಿ ಶಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಯಿತು.

Advertisement

ಪ್ರತಿ ವರ್ಷ ಮಾರ್ಚ್‌ ಒಂದರಂದು ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ|  ಕಲ್ಮಾಡಿ ಶಾಮರಾವ್‌ ಅವರ ಜನ್ಮದಿನದ ನಿಮಿತ್ತ  ಕನ್ನಡ ಸಂಘದ ಸದಸ್ಯರು  ಮತ್ತು ಪರಿವಾರದ ಸದಸ್ಯರಿಗಾಗಿ ಈ ಕಾರ್ಯಕ್ರಮವನ್ನು ಆಚರಿಸುತ್ತಾ ಬಂದಿದೆ. ಈ ವರ್ಷ ದಿವಂಗತ ಡಾ|   ಕಲ್ಮಾಡಿ ಶಾಮರಾಯರ ಜನ್ಮಶತಾಬ್ದಿ ವರ್ಷದಲ್ಲಿ ಅವರ ಮೆಚ್ಚಿನ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಹಲವಾರು ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ವೈಶಿಷ್ಟéಪೂರ್ಣವಾಗಿ  ಶ್ರದ್ಧಾಪೂರ್ವಕವಾಗಿ ಆಚರಿಸಿ ಅವರಿಗೆ ಆದರಾಂಜಲಿ ಅರ್ಪಿಸಲಾಯಿತು.

ಸಂಘದ  ಉಪಾಧ್ಯಕ್ಷೆ ಇಂದಿರಾ ಸಾಲಿಯಾನ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ  ಮತ್ತಿತರ ಗಣ್ಯರು ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನಸಂಪರ್ಕಾಧಿಕಾರಿ ರಾಮದಾಸ್‌ ಆಚಾರ್ಯರು ಸ್ವಾಗತಿಸಿ, 
ಇಂದಿನ ಸಮಾರಂಭ ಮುಖ್ಯವಾಗಿ ಸಂಘದ ಸದಸ್ಯರಿಗಾಗಿ  ತಮ್ಮಲ್ಲಿ ಹುದುಗಿರುವ ಕಲಾ  ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಒದಗಿ ಬರಲೆಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಪ್ರತಿಭಾ ಪ್ರದರ್ಶನ ನೀಡುತ್ತಿರು
ವುದು ಸಂತಸದ ಸಂಗತಿಯಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ನಿಧನರಾದ ವಿಶ್ವಸ್ತ ಗೋವರ್ಧನ ಶೆಟ್ಟಿ ಮತ್ತು ಸದಸ್ಯ  ಮಾಧವ ಹರಿಹರ ಅವರಿಗೆ ಎರಡು ನಿಮಿಷ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.  ಕಾರ್ಯಕ್ರಮದಂಗವಾಗಿ ಭಜನೆ, ವಿವಿಧ ನೃತ್ಯ, ಕವಿತೆ ಮತ್ತು ಹಾಸ್ಯ ಚುಟುಕುಗಳು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ   ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ನೆರೆದ ಕಲಾರಸಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.

ಭಾಗವಹಿಸಿದ ಎಲ್ಲ ಪ್ರತಿಭಾನ್ವಿತರಿಗೆ ಪ್ರಶಸ್ತಿ ಹಾಗೂ ಸ್ಮರಣಿಕೆಗಳನ್ನು  ನೆರೆದ ಗಣ್ಯರಿಂದ ಹಸ್ತದಿಂದ ನೀಡಲಾಯಿತು. ವಿಲ್ಮಾ ಮಾರ್ಟಿಸ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಮುಖ್ಯ ಶಿಕ್ಷಕರಾದ ಚಂದ್ರಕಾಂತ ಹಾರಕೂಡೆ, ಮಾಜಿ ಪ್ರಾಧ್ಯಾಪಕಿ  ಸುನೀತಾ ಶಿರಗುಪ್ಪಿ ಮತ್ತು ಸದಸ್ಯರು ಪರಿವಾರದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

Advertisement

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next