Advertisement

Kannada Serial; ಹೊಸ ಧಾರವಾಹಿ ‘ಅಮೃತ ಘಳಿಗೆ’

03:41 PM Oct 30, 2023 | Team Udayavani |

ಕಿರುತೆರೆಯ ಖ್ಯಾತ ನಿರ್ದೇಶಕ, ಬರಹಗಾರ ರವಿ ಆರ್‌ ಗರಣಿಯವರ ಸಾರಥ್ಯದಲ್ಲಿ “ಅಮೃತ ಘಳಿಗೆ’ ಎಂಬ ಧಾರಾವಾಹಿಯ ಕಥೆ ಮೂಡಿ ಬರುತ್ತಿದ್ದು, ಭಾರತೀಶ್‌ ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

Advertisement

ಕಿರುತೆರೆಯ ಖ್ಯಾತ ಕಲಾವಿದರೊಂದಿಗೆ ಹೊಸ ಕಲಾವಿದರ ಸಂಗಮದೊಂದಿಗೆ ಈ ಧಾರಾವಾಹಿ ಆರಂಭ ವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿ ಪಾತ್ರ ತುಂಬಾ ವಿಶಿಷ್ಟವಾಗಿದೆ.

ಎರಡು ವಿಭಿನ್ನ ನೆಲೆಯ ಕೌಟುಂಬಿಕ ಸಂಘರ್ಷದ ಕಥೆಯಲ್ಲಿನ ತಿರುವುಗಳು ಈ ಮೆಗಾ ಧಾರಾವಾಹಿಗೆ ಹೊಸ ರೂಪ ನೀಡುತ್ತದೆ. ಕೇವಲ ರಿಮೇಕ್‌ ಮತ್ತು ಅದ್ಧೂರಿತನದಲ್ಲೇ ಕಳೆದು ಹೋಗಿರುವ ಧಾರಾವಾಹಿ ಪ್ರಪಂಚಕ್ಕೆ ಕಥೆಯನ್ನೇ ಮೂಲವಾಗಿಟ್ಟುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದೆ.

ಅಕ್ಟೋಬರ್‌ 30 ರಿಂದ ಸೋಮವಾರದಿಂದ ಶುಕ್ರವಾರದ ವರೆಗೆ ರಾತ್ರಿ 9ಗಂಟೆಗೆ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ

Advertisement

Udayavani is now on Telegram. Click here to join our channel and stay updated with the latest news.

Next