Advertisement

Chikkodi; ಕನ್ನಡ ಸ್ವಾಮೀಜಿ ಖ್ಯಾತಿಯ ಚಿಂಚಣಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

09:11 AM Nov 12, 2023 | Team Udayavani |

ಚಿಕ್ಕೋಡಿ: ಕನ್ನಡ ಸ್ವಾಮೀಜಿ ಎಂದೇ ಖ್ಯಾತರಾದ ಚಿಕ್ಕೋಡಿ ತಾಲೂಕಿನ ಚಿಂಚಣಿ ಶ್ರೀ ಅಲ್ಲಮಪ್ರಭು ಸ್ವಾಮೀಜಿ (63) ಅನಾರೋಗ್ಯದಿಂದ ಭಾನುವಾರ ಲಿಂಗೈಕ್ಯರಾದರು.

Advertisement

ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಅಲ್ಲಮಪ್ರಭು ಸಿದ್ದಸಂಸ್ಥಾನಮಠದ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕಳೆದ 30 ವರ್ಷದಿಂದ ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಬೆಳವಣಿಗೆ ಪ್ರಮುಖ ಪಾತ್ರ ವಹಿಸಿ ಕನ್ನಡ ಉಳಿವಿಗಾಗಿ ಹಗಲು ರಾತ್ರಿ ಜಾಗೃತಿ ಮೂಡಿಸುತ್ತಿದ್ದರು. ಪ್ರತಿ ವರ್ಷ ನ.2 ರಂದು ಶ್ರೀಮಠದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಿ ಕನ್ನಡ ಪುಸ್ತಕ ಪ್ರಕಟಿಸಿ ಕನ್ನಡಿಗರಿಗೆ ಓದಲು ಕೊಡುತ್ತಿದ್ದರು.

ಕನ್ನಡ ಉಳಿವಿಗಾಗಿ ಹೋರಾಟ ಮಾಡುವ ಸ್ವಾಮೀಜಿ ಅವರನ್ನು ಕಳೆದುಕೊಂಡು ನಾಡು ಬಡವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next