Advertisement

ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌: ಉಚಿತ ವೈದ್ಯಕೀಯ ಶಿಬಿರ

03:46 PM Feb 13, 2019 | Team Udayavani |

ಮುಂಬಯಿ: ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ಫೆ. 10ರಂದು ಬೆಳಗ್ಗೆಯಿಂದ ಸಂಘದ ಮಹೇಶ್‌ ಶೆಟ್ಟಿ ಅಡಿಟೋರಿಯಂ (ಬಾಬಾಸ್‌) ನಲ್ಲಿ ನಡೆಯಿತು.

Advertisement

ಸಂಘದ ಸದಸ್ಯ ಬಾಂಧವರಿಗೆ ಮತ್ತು ಪ ರಿಸರದ ತುಳು-ಕನ್ನಡಿಗಾಗಿ ಆಯೋಜಿಸಲಾಗಿದ್ದ ಈ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರು, ನಾವು ಕೇವಲ ಸಮಾಜ ಸೇವೆಯಲ್ಲಿ ಮಾತ್ರ ಸೀಮಿತವಾಗಿಸಿಕೊಳ್ಳಬಾರದು. ಅದರೊಂದಿಗೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಉದ್ಧೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಸಂಸ್ಥೆಯು ಇತ್ತೀಚೆಗೆ ಸುವರ್ಣ ಮಹೋತ್ಸವವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು, ಭವಿಷ್ಯದಲ್ಲೂ ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸಂಘವು ಸದಾ ಶ್ರಮಿಸಲಿದೆ. ಇಂದಿನ ಶಿಬಿರದಲ್ಲಿ ಹೆಚ್ಚಿನ ಸದಸ್ಯ ಬಾಂಧವರು ಪಾಲ್ಗೊಂಡಿರುವುದು ಸಂತೋಷದ ವಿಷಯ. ನಾವೆಲ್ಲರೂ ಒಂದಾಗಿ ಸಂಸ್ಥೆಯನ್ನು ಬೆಳೆಸೋಣ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರವಿರಲಿ. ಆರೋಗ್ಯದತ್ತ ಹೆಚ್ಚಿನ ಗಮನ ಹರಿಸೋಣ ಎಂದರು.

ರೆಲಿಗೇರ್‌ ಹೆಲ್ತ್‌ ಇನೊÏರೆನ್ಸ್‌ ಇದರ ಅನಿತಾ ಶೆಟ್ಟಿ ಕಫ್‌ಪರೇಡ್‌, ಹೆಲ್ತ್‌ ಸ್ಟ್ರಿಂಗ್‌ ಹೆಲ್ತ್‌ಕೇರ್‌ ಪ್ರೈವೇಟ್‌ ಲಿಮಿಟೆಡ್‌ನ‌ ಸದಸ್ಯರು, ವಿಕ್ರೋಲಿಯ ವೈಭವ್‌ ಆಪ್ಟಿಕ್ಸ್‌ನ ಸದಸ್ಯರು ಈ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಆರೋಗ್ಯ ತಪಾಸಣೆ
ಶಿಬಿರದಲ್ಲಿ ಮಧುಮೇಹ ತಪಾಸಣೆ, ರಕ್ತದೊತ್ತಡ ಹಾಗೂ ಆರೋಗ್ಯ ಸಮಸ್ಯೆಗಳ ನಿವಾರಣೆಯ ಬಗ್ಗೆ ಮಾಹಿತಿ, ದೇಹದ ತೂಕ ಹೆಚ್ಚಳ, ಸಮತೋಲನೋಪಾಯ, ನೇತ್ರ ತಪಾಸಣೆ ಇನ್ನಿತರ ಆರೋಗ್ಯ ಸಂಬಂಧಿ ತಪಾಸಣೆಗಳನ್ನು ಶಿಬಿರದಲ್ಲಿ ಆಯೋಜಿಸಲಾಗಿತ್ತು.

ಸಂಸ್ಥೆಯ ಉಪಾಧ್ಯಕ್ಷ ಜಯರಾಜ್‌ ಜೈನ್‌, ಕಾರ್ಯದರ್ಶಿ ಸುಧಾಕರ ಎಲ್ಲೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ, ನಂದಳಿಕೆ ನಾರಾಯಣ ಶೆಟ್ಟಿ, ರಮಾನಂದ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಎಸ್‌. ಎ. ಮೆಂಡನ್‌, ತಿಮ್ಮ ದೇವಾಡಿಗ, ವೀಣಾ ಶೆಟ್ಟಿ, ವಿಶ್ವನಾಥ ಪೂಜಾರಿ, ಹೆರಿಯಣ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

ರಂಗಕರ್ಮಿ ನಂದಳಿಕೆ ನಾರಾಯಣ ಶೆಟ್ಟಿ ಅವರು ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷ ನವೀನ್‌ ಶೆಟ್ಟಿ ಅವರು ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದಿಸಿದರು. ಸದಸ್ಯ ಬಾಂಧವರು ಸೇರಿದಂತೆ ನೂರಾರು ಮಂದಿ ತುಳು-ಕನ್ನಡಿಗರು ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗಪಡಿಸಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next