Advertisement

ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ 12ನೇ  ವಾರ್ಷಿಕ ಕಲೋತ್ಸವ

05:04 PM Feb 10, 2019 | |

ಮುಂಬಯಿ: ಕನ್ನಡಿಗರ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಸಂಸ್ಥೆಯ ಹನ್ನೆರಡನೆಯ ವಾರ್ಷಿಕ ಕಲೋತ್ಸವದ ಪೂರ್ವಭಾವಿ ಸಭೆಯು ಸಾಂತಾಕ್ರೂಜ್‌ ಪೂರ್ವದ  ಬಿಲ್ಲವರ ಭವನ ಕಚೇರಿಯಲ್ಲಿ ಕನ್ನಡಿಗ ಕಲಾವಿದರ ಪರಿಷತ್ತಿನ ಅಧ್ಯಕ್ಷರಾದ  ಡಾ|  ಸುರೇಂದ್ರ ಕುಮಾರ್‌ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.

Advertisement

ಮಾ.  9ರಂದು ಸಾಂತಾಕ್ರೂಜ್‌ ಬಿಲ್ಲವರ ಭವನದ ಸಭಾಂಗಣದಲ್ಲಿ ವಾರ್ಷಿಕ ಕಲೋತ್ಸವ ಸಂಭ್ರಮ ವನ್ನು, ಪ್ರಶಸ್ತಿ ಪುರಸ್ಕಾರ, ಸಾಧಕರಿಗೆ ಸಮ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಅದ್ದೂರಿಯಿಂದ ನಡೆಸಲು ನಿರ್ಧರಿಸ
ಲಾಯಿತು. ಅಂದು ಮಧ್ಯಾಹ್ನ 2.30ಕ್ಕೆ  12ನೇ ವರ್ಷದ ಕಲೋತ್ಸವವು ಉದ್ಘಾಟನೆಗೊಂಡು ರಾತ್ರಿ 8ರಿಂದಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಹೆಗ್ಡೆ ತಿಳಿಸಿದರು.

ಈ ವರ್ಷವೂ ಕೊಡುಗೈ ದಾನಿ ಆರ್‌. ಕೆ. ಶೆಟ್ಟಿ ಅವರ ಸಹಕಾರದಿಂದ ಪ್ರತಿಭಾನ್ವಿತ ಕಲಾವಿದರಿಗೆ  ಕಲಾಶ್ರೀ  ಎನ್ನುವ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು.  ಈ ಸಂದರ್ಭದಲ್ಲಿ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಯಿತು. ಈ ಸಮಿತಿಯಲ್ಲಿ ಅಧ್ಯಕ್ಷರಾದ ಡಾ|  ಸುರೇಂದ್ರ ಕುಮಾರ್‌ ಹೆಗ್ಡೆ, ಕಾರ್ಯದರ್ಶಿ ಬಾಬಾಪ್ರಸಾದ್‌ ಅರಸ, ಡಾ| ಸುನಿತಾ ಶೆಟ್ಟಿ,  ಜಿ. ಟಿ. ಆಚಾರ್ಯ, ಕೆ. ಕೆ. ಶೆಟ್ಟಿ ಅವರನ್ನು ನೇಮಿಸಲಾಯಿತು ಹಾಗೂ ಅಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿಷತ್ತಿನ ಸದಸ್ಯರಿಂದ, ಸಂಗೀತ,  ನೃತ್ಯ ವೈಭವ ಮತ್ತು ನಾಟಕ  ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳಲಿವೆೆ.

ಮಾ. 9ರ ದಿನವನ್ನು ಮುಂಬಯಿಯ ಎÇÉಾ   ಕಲಾವಿದರು ಪರಿಷತ್ತಿನ ಕಾರ್ಯಕ್ರಮಕ್ಕೆ ಮೀಸಲಿಡಬೇಕಾಗಿ ಅಧ್ಯಕ್ಷರು ವಿನಂತಿಸಿದರು.  ಕೊನೆಯಲ್ಲಿ ಪರಿಷತ್ತಿನ ಗೌರವ ಪ್ರಧಾನ ಕಾರ್ಯದರ್ಶಿ ಬಾಬಾ ಪ್ರಸಾದ್‌ ಅರಸ ಕುತ್ಯಾರು ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next