Advertisement

ಕನ್ನಡಮ್ಮನ ಶಿಕ್ಷಣ ರಥಯಾತ್ರೆಗೆ ಚಾಲನೆ

01:12 PM Nov 18, 2021 | Team Udayavani |

ರಾಯಚೂರು: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಶುರುವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡಮ್ಮ ಶಿಕ್ಷಣ ರಥಯಾತ್ರೆಗೆ ಚಾಲನೆ ನೀಡಲಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯದ ಗುಲ್ಬರ್ಗ ಪ್ರಾದೇಶಿಕ ನಿರ್ದೇಶಕ ಡಾ| ಸಂಗಮೇಶ ಹಿರೇಮಠ ತಿಳಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ, ಕಲಿಕಾರ್ಥಿ ಸಹಾಯ ಕೇಂದ್ರ ಲಿಂಗಸುಗೂರು ಮತ್ತು ಪರೀಕ್ಷಾ ಕೇಂದ್ರದಿಂದ 2021-22ನೇ ಸಾಲಿನ ಬೃಹತ್‌ ಆನ್‌ ಲೈನ್‌ ಪ್ರವೇಶಾತಿ ಮಹಾಮೇಳದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಥಯಾತ್ರೆ ನಡೆಯಲಿದ್ದು, ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ, ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಉಚಿತ ಪ್ರವೇಶವಿದೆ. ಆನ್‌ ಲೈನ್‌ನಲ್ಲಿ ಪ್ರವೇಶವಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಪಡೆಯುವಂತೆ ಎಂದರು. ಡಾ| ನರಕಲದಿನ್ನಿ ಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next