Advertisement

Kanniyakumari : ಛತ್ರಪತಿ ಶಿವಾಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

10:09 PM Apr 09, 2023 | Team Udayavani |

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಛತ್ರಪತಿ ಶಿವಾಜಿ ಅವರ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

Advertisement

ಧ್ವಂಸಗೊಳಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದು ನಮಗೆ ತಿಳಿದಿಲ್ಲ. ಪ್ರತಿಮೆಗೆ ಸ್ವಲ್ಪ ಹಾನಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳು ಇದ್ದಾರೆಯೇ ಅಥವಾ ನಿಖರವಾಗಿ ಏನಾಯಿತು ಎಂಬುದನ್ನು ಪತ್ತೆ ಹಚ್ಚಲು ತಂಡ ರಚಿಸಿದ್ದೇವೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಕನ್ಯಾಕುಮಾರಿ ಎಸ್ಪಿ ಹರಿ ಕಿರಣ್ ಪ್ರಸಾದ್ ಹೇಳಿಕೆ ನೀಡಿದ್ದಾರೆ.

ಒಂಬತ್ತು ಅಡಿಯ ಛತ್ರಪತಿ ಶಿವಾಜಿ ಪ್ರತಿಮೆಯನ್ನು 15 ವರ್ಷಗಳ ಹಿಂದೆ ಕುಜಿತರೈ ಪ್ರದೇಶದಲ್ಲಿ ತೊತ್ತತುಮಡಂ ನವನೀತಕೃಷ್ಣನ್ ದೇವಸ್ಥಾನದ ಬಳಿ ಸ್ಥಾಪಿಸಲಾಗಿತ್ತು. ಏತನ್ಮಧ್ಯೆ, ಪ್ರತಿಭಟನಾಕಾರರು ಪ್ರದೇಶದಲ್ಲಿ ಜಮಾವಣೆಗೊಂಡ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next