Advertisement

ಆಸ್ಕರ್‌ ಗೆ ಅರ್ಹತೆ ಪಡೆದ ದಂತಕಥೆ ʼಕಾಂತಾರʼ: ಸಂತಸ ಹಂಚಿಕೊಂಡ ಹೊಂಬಾಳೆ

10:57 AM Jan 10, 2023 | Team Udayavani |

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ.

Advertisement

ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ಈಗ ಆಸ್ಕರ್‌ ಒಪ್ಪಿಕೊಂಡಿದ್ದು, ಆ ಮೂಲಕ ʼಕಾಂತಾರʼ ಸಿನಿಮಾ ಕೂಡ ಆಸ್ಕರ್ ರೇಸ್‌ ನಲ್ಲಿ ಕಾಣಿಸಿಕೊಳ್ಳಲಿದೆ.‌ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವೀಟ್‌ ಮಾಡಿ ವಿಷಯವನ್ನು ಹಂಚಿಕೊಂಡಿದೆ.

‘ಕಾಂತಾರ’ ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ! ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದಿದೆ.

ಉತ್ತಮ ಚಿತ್ರ ಹಾಗೂ ಉತ್ತಮ ನಟ ವಿಭಾಗದಲ್ಲಿ 301 ಸಿನಿಮಾಗಳೊಂದಿಗೆ ʼಕಾಂತಾರʼ ಪ್ರಶಸ್ತಿಗೆ ಸೆಣಸಾಟ ನಡೆಸಲಿದೆ.

Advertisement

ಪ್ಯಾನ್‌ ಇಂಡಿಯಾದಲ್ಲಿ ʼಕಾಂತಾರ; ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತ್ತು. ಈ ವರ್ಷದ ಆಸ್ಕರ್ ಪ್ರಶಸ್ತಿಯ ಅಂತಿಮ ನಾಮನಿರ್ದೇಶನ ಜ. 24ರಂದು ಘೋಷಣೆಯಾಗಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next