Advertisement

ಬಿಎಂಎಲ್ ಕಾಂತರಾಜು ಕಾಂಗ್ರೆಸ್ ಗೆ: ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಮನವಿ

05:01 PM Jan 20, 2022 | Team Udayavani |

ಬೆಂಗಳೂರು : ಮಾಜಿ ಎಂಎಲ್ಸಿ ಬಿಎಂಎಲ್ ಕಾಂತರಾಜು ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು, ಕೊರೊನ ನಿಯಮಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರು ಯಾರೂ ಬರಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

Advertisement

ಜವಾಬ್ದಾರಿಯುತ ಪಕ್ಷದ ಪ್ರತಿನಿಧಿಗಳಾಗಿ ಕೊರೋನ ನಿಯಮಗಳ ಪಾಲನೆ ನಮ್ಮೆಲ್ಲರ ಕರ್ತವ್ಯ. ಕಾರ್ಯಕರ್ತರು ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನನ್ನ ಮನವಿಗೆ ಸ್ಪಂದಿಸಬೇಕು. ಆಹ್ವಾನಿತ ಮುಖಂಡರನ್ನು ಹೊರತುಪಡಿಸಿ ಬೇರಾರೂ ಬರಕೂಡದು ಎಂದು ಮಾಧ್ಯಮ ಹೇಳಿಕೆ ಮೂಲಕ ಅವರು ತಿಳಿಸಿದ್ದಾರೆ.

ಜೆಡಿಎಸ್‌ ತೊರೆದಿರುವ ಕಾಂತರಾಜು ಅವರು ತುಮಕೂರು ಜಿಲ್ಲೆಯ ತುರುವೆಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next