Advertisement

ಭೂ ಸುಧಾರಣೆ ಕಾಯ್ದೆಗೆ ಕಾಂತಾ ವಿರೋಧ

07:29 AM Jun 14, 2020 | Suhan S |

‌ಕಲಬುರಗಿ: ಸಾಧಕ-ಬಾಧಕ ಅವಲೋಕಿಸದೇ ಸರ್ಕಾರ ಭೂ-ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮುಖಾಂತರ ರೈತರ ಜಮೀನನ್ನು ಉಳ್ಳವರ ಪಾಲು ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಎಸ್‌.ಕೆ. ಕಾಂತಾ ಟೀಕಿಸಿದ್ದಾರೆ.

Advertisement

ಭೂ ಸುಧಾರಣೆಯ ರಾಜ್ಯ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಒಂದು ವೇಳೆ ತಿದ್ದುಪಡಿ ತಂದರೆ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆಯೂ ಬಿಜೆಪಿ ಸರ್ಕಾರವು ಸಾವಿರಾರು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಆದರೆ ಎಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸದೆ ಹಾಗೆ ಬಿಡಲಾಗಿದೆ. ಒಟ್ಟಾರೆ ಈಗಲೂ ಬಿಜೆಪಿ ಸರ್ಕಾರ ರೈತರ ಜಮೀನನ್ನು ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ, ರಿಯಲ್‌ ಎಸ್ಟೇಟ್‌ ದಂಧೆ ಮಾಡುವವರಿಗೆ ಮತ್ತು ಲ್ಯಾಂಡ್‌ ಮಾಫಿಯಾಗಳಿಗೆ ದೊರೆಯುವಂತೆ ಮಾಡಲು ಹೊರಟಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ವಿರೋಧವಿದ್ದರೂ ಎಲ್ಲ ನಿಟ್ಟಿನಿಂದ ಒತ್ತಡ ತಂದು ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತಿತ್ತು. ಅದೇ ರೀತಿ ಜಿಲ್ಲೆಯ ಸೇಡಂ ಸಿಮೆಂಟ್‌ ಕಂಪನಿಯು ಕಾಯ್ದೆ ವಿರೋಧಿ ಸಿ ರೈತರ ಜಮೀನು ಸ್ವಾಧೀನಪಡಿಸಿಕೊಂಡಿದೆ.ಜಮೀನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಐದು ವರ್ಷಗಳಿಂದಲೂ ನಿರಂತರ ಹೋರಾಟ ನಡೆಸಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳಿಗೆ, ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ ಎಂದು ಹೇಳಿದರು.

ಕೃಷಿ ಭೂಮಿ ಪರಭಾರೆ ಸಂಬಂಧ ಜಾರಿಯಲ್ಲಿದ್ದ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79(ಎ)(ಬಿ)ಗೆ ತಿದ್ದುಪಡಿ ತರದಂತೆ ಎಲ್ಲ ಪ್ರತಿಪಕ್ಷಗಳು ಸಂಘಟಿತ ಹೋರಾಟ ನಡೆಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next