Advertisement

ದೂರದರ್ಶನ ವಾಹಿನಿ ನಿರೂಪಕಿ ಕಾನುಪ್ರಿಯಾ ಕೋವಿಡ್‍ಗೆ ಬಲಿ

09:37 PM May 01, 2021 | Team Udayavani |

ನವದೆಹಲಿ: ದೂರದರ್ಶನ ವಾಹನಿ , ಬ್ರಹ್ಮಕುಮಾರಿ ಟಿವಿ ನಿರೂಪಕಿ ಕಾನುಪ್ರಿಯಾ ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

Advertisement

ಕಾನುಪ್ರಿಯ ಕೇವಲ ನ್ಯೂಸ್ ಆ್ಯಂಕರ್ ಮಾತ್ರವಲ್ಲ, ನಟಿ ಹಾಗೂ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದರು. ಕೋವಿಡ್‍ನಿಂದ ಅಸ್ವಸ್ಥರಾಗಿದ್ದ ಕಾನುಪ್ರಿಯಾಳನ್ನು 11 ಸೆಕ್ಟರ್ ನೋಯ್ಡಾದಲ್ಲಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.

ತನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರ ಪ್ರಾರ್ಥನೆ ಅಗತ್ಯ ಎಂದು ಕಾನುಪ್ರಿಯಾ ಎರಡು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.ಕೋವಿಡ್ ಸೋಂಕು ಶ್ವಾಸಕೋಶಕ್ಕೆ ತಗುಲಿತ್ತು. ಹೀಗಾಗಿ ಕಡಿಮೆ ಆಮ್ಲಜನಕ ಮಟ್ಟ ಮತ್ತು ತೀವ್ರ ಜ್ವರದಿಂದಾಗಿ ಕಾನುಪ್ರಿಯಾ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಆಧ್ಯಾತ್ಮಿಕ ಗುರು ಮತ್ತು ಬ್ರಹ್ಮ ಕುಮಾರಿ ಸೋದರಿ ಬಿ.ಕೆ.ಶಿವಾನಿ ಕಾನುಪ್ರಿಯಾ ನಿಧನ ವಾರ್ತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ನೋವಿನಿಂದ ಹಂಚಿಕೊಂಡಿದ್ದಾರೆ.

ಇನ್ನು ಶುಕ್ರವಾರವಷ್ಟೇ ಆಜ್‌ತಕ್ ಸುದ್ದಿವಾಹಿನಿ ನಿರೂಪಕ, ಪತ್ರಕರ್ತ ರೋಹಿತ್ ಸರ್ದಾನ ಕೂಡ್ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next