Advertisement

ಬರಾಯ ಕನ್ಯಾಡಿಯಲ್ಲಿ ನಿಧಿ ವದಂತಿ! ಬರಿಗೈಯಲ್ಲಿ ವಾಪಸ್ಸಾದ ತಂಡ

06:27 PM Jul 22, 2020 | sudhir |

ಬೆಳ್ತಂಗಡಿ : ನಿಧಿ ಇದೆ ಎಂಬ ವದಂತಿ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ನಡೆದ ಶೋಧ ಕಾರ್ಯ ಮುಗಿಸಿ ಏನೂ ಸಿಗದೇ ಬರಿಗೈಯಲ್ಲಿ ವಾಪಸ್ಸಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಬರಾಯ ಕನ್ಯಾಡಿ ಗ್ರಾಮದ ಪಣೆತ್ತಡಿಯಲ್ಲಿ ಬುಧವಾರ ನಡೆದಿದೆ.

Advertisement

ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿಗಳು ಎದ್ದಿದು ಈ ವಿಷಯವಾಗಿ ಅಲ್ಲಿನ ಸ್ಥಳೀಯರು ಯಾರೋ ಜಾಗದ ವಿಡಿಯೋ ಮಾಡಿ ಅಧಿಕಾರಿಗಳಿಗೆ ಕಳುಹಿಸಿದ್ದರು. ಇದನ್ನು ಪರಿಶೀಲಿಸಿದ ಅಧಿಕಾರಿಗಳು ತಮ್ಮ ತಂಡದೊಂದಿಗೆ ನಿಧಿ ಇದೆ ಎನ್ನಲಾದ ಜಾಗಕ್ಕೆ ಬಂದಿದ್ದು ಸ್ಥಳವನ್ನು ಪರಿಶೀಲಿಸಿ ನಿಧಿಯ ಯಾವುದೇ ಕುರುಹುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬರಿಗೈಯಲ್ಲಿ ವಾಪಸಾಗಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ಇಲ್ಲಿ ನಿಧಿ ಇರುವ ಬಗ್ಗೆ ದೂರು ಬಂದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ನಿಧಿ ಲಭ್ಯವಾಗಿಲ್ಲ ಎಂದು ತಹಶೀಲ್ದಾರ್ ಸ್ಪಷ್ಟಣೆ ನೀಡಿದ್ದಾರೆ.

ಬರಾಯ ಕನ್ಯಾಡಿಯಲ್ಲಿ ನಿಧಿ ವದಂತಿ! ಸ್ಥಳಕ್ಕೆ ತಹಶೀಲ್ದಾರ್, ಪೊಲೀಸರು ದೌಡು

ಸ್ಥಳದಲ್ಲಿ ತಾಳೆಮರವಿದ್ದು, ಅದನ್ನು ತೆರವುಗೊಳಿಸುವಾಗ ಮಣ್ಣು ಕುಸಿತಗೊಂಡಿದ್ದು ಯಾವುದೇ ನಿಧಿ ಇಲ್ಲ ಎಂದು ಜಮೀನಿನ ಯಜಮಾನ ಆನಂದ ಶೆಟ್ಟಿ ಮೊದಲೇ ತಿಳಿಸಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next