Advertisement

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಹೊಳೆಗೆ ಬಿದ್ದು ಸಾವು

11:49 PM Jul 17, 2023 | Team Udayavani |

ಕಾಪು: ಮೀನು ಹಿಡಿಯಲು ದೋಣಿಯಲ್ಲಿ ಹೋಗಿದ್ದ ವ್ಯಕ್ತಿ ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ.

Advertisement

ಉದ್ಯಾವರ ಅಂಕುದ್ರು ನಿವಾಸಿ ರಾಘು (60) ಮೃತ ವ್ಯಕ್ತಿ. ಅವರು ಬಲೆ ಸಹಿತ ಇತ್ಯಾದಿ ಸಾಮಗ್ರಿಗಳೊಂದಿಗೆ ಮೀನು ಹಿಡಿಯಲು ರವಿವಾರ ಮಧ್ಯಾಹ್ನ ದೋಣಿಯಲ್ಲಿ ಉದ್ಯಾವರ ಪಿತ್ರೋಡಿ ಪಾಪನಾಶಿನಿ ಹೊಳೆಗೆ ಹೋಗಿದ್ದರು. ಬಲೆ ಬೀಸುವ ವೇಳೆ ಆಯ ತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.

ರವಿವಾರ ಮಧ್ಯಾಹ್ನ ಮೀನುಗಾರಿಕೆಗೆ ಹೋಗಿದ್ದ ಅವರಿಗಾಗಿ ಮನೆಯವರು ರಾತ್ರಿಯವರೆಗೂ ಹುಡುಕಾಟ ನಡೆಸಿದ್ದರು. ಸೋಮವಾರ ಬೆಳಗ್ಗೆ ಪಿತ್ರೋಡಿ ಹೊಳೆ ಪರಿಸರದಲ್ಲಿ ಮೃತದೇಹ ಪತ್ತೆಯಾಗಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next