Advertisement

ಕಾಪು ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

01:11 PM Jul 14, 2020 | mahesh |

ಕಾಪು: ಕಾಪು ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಂಗಳವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Advertisement

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಎರ್ಮಾಳ್ ಮಾತನಾಡಿ, ಗಿಡ ಮರಗಳನ್ನು ಬೆಳೆಸುವ ಮೂಲಕ ಸ್ವಚ್ಛ ಪರಿಸರದ ನಿರ್ಮಾಣ ಸಾಧ್ಯವಿದೆ. ಸ್ವಚ್ಛ ಪರಿಸರ ನಮ್ಮದಾಗಿದ್ದರೆ ಮಾತ್ರಾ ನಾವು ಆರೋಗ್ಯವಂತರಾಗಿಲು ಸಾಧ್ಯವಿದೆ. ಇಂದಿನ ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಲ್ಲಿ ಈ ಬಗ್ಗೆಯೂ ಜಾಗೃತಿ ಮೂಡಿಸುವ ಪ್ರಯತ್ನ ಪಕ್ಷದ ಮೂಲಕ ನಡೆಯಬೇಕಿದೆ ಎಂದರು.

ಉಡುಪಿ ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್, ಸದಸ್ಯೆ ಶಶಿಪ್ರಭಾ ಶೆಟ್ಟಿ, ಬಿಜೆಪಿ ಕಾಪು ಕ್ಷೇತ್ರಾದ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಕಾಪು ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಯು.ಶೆಟ್ಟಿ, ಪಕ್ಷದ ಮುಖಂಡರಾದ ಕೇಸರಿ ಯುವರಾಜ್,ಸುರೇಖಾ ಅಮೀನ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸಂದೀಪ್ ಶೆಟ್ಟಿ, ಸಚಿನ್ ಪಿತ್ರೋಡಿ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸುಧಾಮ ಶೆಟ್ಟಿ, ಕಾಪು ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಮಮತಾ ಕುಶ ಸಾಲ್ಯಾನ್, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್, ಬಡಾ ಗ್ರಾ.ಪಂ. ಉಪಾಧ್ಯಕ್ಷೆ ಇಂದಿರಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next