Advertisement

ಕಾಪು: ಕಣ್ಮರೆಯಾಗಿದ್ದ ಮೀನುಗಾರನ ಶವ ಪತ್ತೆ

01:10 PM Jan 07, 2023 | Team Udayavani |

ಕಾಪು: ಮೀನುಗಾರಿಕೆ ನಡೆಸಿ ವಾಪಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಮಂಗಳೂರು ಪಾಂಡೇಶ್ವರದ ಮೀನುಗಾರನ ಮೃತ ದೇಹ ಶುಕ್ರವಾರ ಕಾಪು ಬಳಿಯ ಸಮುದ್ರದಲ್ಲಿ ಪತ್ತೆಯಾಗಿದೆ.

Advertisement

ಜ. 3ರಂದು ಬೆಳಗ್ಗೆ ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪಾಂಡೇಶ್ವರ ನಿವಾಸಿ ಆನಂದ (36) ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಈ ಬಗ್ಗೆ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶುಕ್ರವಾರ ಬೆಳಗ್ಗೆ ಕಾಪು ಬೀಚ್‌ ಬಳಿಯ ಸಮುದ್ರದಲ್ಲಿ ಮೃತದೇಹವು ಪತ್ತೆಯಾಗಿದ್ದು ಬಳಿಕ ಮುಳುಗುತಜ್ಞ ಈಶ್ವರ ಮಲ್ಪೆ ಅವರ ನೆರವು ಮತ್ತು ಪ್ರತಾಪ್‌ ಪಡುಕೆರೆ ಹಾಗೂ ಪರ್ಸಿನ್‌ ಬೋಟ್‌ನವರ ಸಹಕಾರದೊಂದಿಗೆ ಮೇಲಕ್ಕೆತ್ತಲಾಯಿತು.

ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಮನೆಯವರಿಗೆ ಹಸ್ತಾಂತರಿಸಲಾಗಿದೆ. ಕಾಪು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮೀನುಗಾರ ಆನಂದ ಅವರು ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next