Advertisement

Kapu ಕಾರು ಢಿಕ್ಕಿ; ಸ್ಕೂಟಿ ಸವಾರ ಗಂಭೀರ

12:15 AM Oct 28, 2023 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡುಬೆಟ್ಟು ಬಳಿ ಕಾರು ಢಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

Advertisement

ವಿಜಯ ಬ್ಯಾಂಕ್‌ ನಿವೃತ್ತ ಸಿಬಂದಿ ಕಾಪು ನಿವಾಸಿ ಗೋಪ ಪೂಜಾರಿ (70) ಗಾಯಾಳು ಸ್ಕೂಟಿ ಸವಾರ. ಉಡುಪಿಯಿಂದ ಮಂಗಳೂರು ರಸ್ತೆಯಲ್ಲಿ ಕಾಪುವಿನತ್ತ ಆಗಮಿಸುತ್ತಿದ್ದ ಸ್ಕೂಟಿಗೆ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು, ಗೋಪ ಪೂಜಾರಿ ಸ್ಕೂಟಿ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವಿಗೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನೊಂದಿಗೆ ಚಾಲಕ ಪರಾರಿ
ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದು, ಕಾರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next