Advertisement

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

12:47 AM May 05, 2024 | Team Udayavani |

ಕಾಪು: ಮುಂಬಯಿಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ಉದ್ಯಾವರ ಗ್ರಾಮದ ಉದಯ ವಿ. ಆಚಾರ್ಯ (49) ಜಾಂಡೀಸ್‌ ಕಾಯಿಲೆಯಿಂದ ಬಳಲುತ್ತಿದ್ದು ದೇಹಸ್ಥಿತಿ ವಿಷಮಿಸಿ ಉಡುಪಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯವಾಗ ಮೇ 3ರಂದು ಸಾವನ್ನಪ್ಪಿದ್ದಾರೆ.

Advertisement

ಮೇ 1ರಂದು ಮುಂಬಯಿಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಆ್ಯಂಬುಲೆನ್ಸ್‌ ಮೂಲಕ ಊರಿಗೆ ಕರೆತಂದಿದ್ದು, ಮೇ 3ರಂದು ರಾತ್ರಿ ದೇಹಸ್ಥಿತಿ ಉಲ್ಬಣಿಸಿದಾಗ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆ ವೇಳೆಗಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next