Advertisement

Kapu ಮಹಿಳಾ ಪೊಲೀಸ್‌ ಆತ್ಮಹತ್ಯೆ ಪ್ರಕರಣ: ಪತಿ ಸೆರೆ

07:27 AM Apr 01, 2024 | Team Udayavani |

ಕಾಪು: ಕಾಪು ಪೊಲೀಸ್‌ ಠಾಣೆಯ ಮಹಿಳಾ ಪೊಲೀಸ್‌ ಜ್ಯೋತಿ (32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಮಾ.30ರಂದು ರಾತ್ರಿ ವೇಳೆ ಬಂಧಿಸಿದ್ದಾರೆ.

Advertisement

ಬಾಗಲಕೋಟೆ ಜಿಲ್ಲೆಯ ಇಳಕಲ್‌ ತಾಲೂಕಿನ ರವಿಕುಮಾರ್‌(35) ಬಂಧಿತ ಆರೋಪಿ. ಈತ ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದ. ಜ್ಯೋತಿ ಕಾಪು ಠಾಣೆ ಸಿಬಂದಿಯಾಗಿರುವುದರಿಂದ ಇವರಿಬ್ಬರು ಠಾಣೆಯ ಸಮೀಪದಲ್ಲೇ ಇರುವ ಪೊಲೀಸ್‌ ವಸತಿಗೃಹದಲ್ಲಿ ವಾಸವಾಗಿದ್ದರು. ಮಾ. 29ರಂದು ರಾತ್ರಿ ಇವರಿಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಇದೇ ವಿಚಾರದಲ್ಲಿ ನೊಂದುಕೊಂಡು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಡೈರಿ ಪತ್ತೆ: ಜ್ಯೋತಿ ರೂಮಿನಲ್ಲಿ ಡೈರಿಯೊಂದು ಲಭಿಸಿದೆ. ಅದರಲ್ಲಿ ನನ್ನ ಸಾವಿಗೆ ಪತಿಯ ಅನುಮಾನವೇ ಕಾರಣ ಎಂದು ಉಲ್ಲೇಖಿಸಲಾಗಿದೆ. ಇತರ ಕಾರಣಗಳೂ ಡೈರಿಯಲ್ಲಿದ್ದು, ಆ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಅವರ ತಾಯಿ ದೇವಮ್ಮ ವಿಟ್ಲಾಪುರ ನೀಡಿದ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next