Advertisement

ಅಕಾಲಿಕ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಸಂಪೂರ್ಣ ನಾಶ; ರೈತರ ಗದ್ದೆಗೆ ಸಂಸದ ಶಾಸಕರ ಭೇಟಿ

10:47 AM Apr 08, 2020 | keerthan |

ಗಂಗಾವತಿ: ತಾಲ್ಲೂಕಿನಾದ್ಯಂತ ಸೋಮವಾರ ಸಂಜೆ ಸುರಿದ ಆಲಿಕಲ್ಲು ಮಳೆ ಗಾಳಿಗೆ ಬೆಳೆದು ನಿಂತ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ಇದರಿಂದ ರೈತರ ಬದುಕು ಸಂಕಷ್ಟಕ್ಕೆ ಗುರಿಯಾಗಿದೆ. ಅಚ್ಚುಕಟ್ಟು ಪ್ರದೇಶದ 80 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದ್ದು ಇದರಿಂದ ರೈತರಿಗೆ ಸಂಕಷ್ಟವುಂಟಾಗಿದೆ. ಈಗಾಗಲೇ ಕಟಾವಿಗೆ ಬಂದಿದ್ದ ಭತ್ತ ನಾಶವಾಗಿದೆ.

Advertisement

ಸಂಸದ ಶಾಸಕರ ಭೇಟಿ: ಅಕಾಲಿಕ ಮಳೆಯಿಂದ ನೆಲಕ್ಕುರುಳಿದ ಭತ್ತದ ಗದ್ದೆ ಪ್ರದೇಶಕ್ಕೆ ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ ಉದಯವಾಣಿ ಜತೆ ಮಾತನಾಡಿ ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವುಂಟಾಗಿದ್ದು ಪ್ರತಿ ಎಕರೆ ಪರಿಹಾರ ನೀಡಬೇಕಿದ್ದು ಕಂದಾಯ ಕೃಷಿ ಇಲಾಖೆ ಜಂಟಿ ಸರ್ವೆ ನಡೆಸಿದ ನಂತರ‌ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next