Advertisement

ಡಾl ಸಂಧ್ಯಾ ಎಸ್. ಪೈ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ

12:32 PM Oct 10, 2021 | Team Udayavani |

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮತ್ತು ಕಾರಂತ ಹುಟ್ಟುಹಬ್ಬ ಆಚರಣಾ ಸಮಿತಿ ಕೊಡಮಾಡುವ ಈ ವರ್ಷದ “ಕಾರಂತ ಪ್ರಶಸ್ತಿ’ಯನ್ನು ಲೇಖಕರು, “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ| ಸಂಧ್ಯಾ ಎಸ್‌. ಪೈ ಅವರಿಗೆ ಭಾನುವಾರ ನೀಡಿ ಗೌರವಿಸಲಾಗಿದೆ.

Advertisement

ಮಂಗಳೂರಿನಲ್ಲಿ ನಡೆದ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭದಲ್ಲಿ ಡಾ| ಸಂಧ್ಯಾ ಎಸ್‌. ಪೈ ಅವರಿಗೆ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್ ,ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ , ವಿದ್ವಾಂಸ ಡಾ| ಪ್ರಭಾಕರ ಜೋಶಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಡಾ| ಸಂಧ್ಯಾ ಎಸ್‌. ಪೈ ಅವರು ಕನ್ನಡ ಪತ್ರಿಕೋದ್ಯಮದಲ್ಲಿ ಓರ್ವ ಮಹಿಳಾ ಸಾಧಕರಾಗಿ, “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸುವ ಮೂಲಕ ಮೌಲಿಕ ಚಿಂತನೆಯೊಂದಿಗೆ ಓದುಗರಿಗೆ ಸಮಗ್ರ ಜ್ಞಾನ ಭಂಡಾರವನ್ನು ಒದಗಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ 2013ರಲ್ಲಿ ಗೌರವ ಡಾಕ್ಟರೆಟ್‌ ಪದವಿ ನೀಡಿ ಗೌರವಿಸಿದೆ. ಪತ್ರಿಕೋದ್ಯಮದಲ್ಲಿ ಉನ್ನತ ಸಾಧನೆಗಾಗಿ “ಅತ್ತಿಮಬ್ಬೆ ಪ್ರಶಸ್ತಿ’ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next