Advertisement

ಪೊಲೀಸರಿಗೆ ಶರಣಾದ ಕರವೇ ಕಾರ್ಯಕರ್ತರು, ಮುಷ್ಕರ ಕೈಬಿಟ್ಟ ವೈದ್ಯರು, ಒಪಿಡಿ ಆರಂಭ

09:28 AM Nov 09, 2019 | Team Udayavani |

ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪ್ರತಿಭಟನೆ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Advertisement

ಇಂದು ಬೆಳಗ್ಗೆ ಅಶ್ವಿನಿಗೌಡ ಸೇರಿದಂತೆ 13 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿವಿ ಪುರಂ ಪೊಲೀಸರಿಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಪಿಡಿ ಬಂದ್ ನಡೆಸಿ ವೈದ್ಯರು ನಡೆಸುತ್ತಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ವರದಿ ತಿಳಿಸಿದೆ.

ಪ್ರತಿಭಟನೆ ಕೈಬಿಟ್ಟ ವೈದ್ಯರು ಕರ್ತವ್ಯಕ್ಕೆ ಹಾಜರಾಗಿದ್ದು, ಎಲ್ಲೆಡೆ ಒಪಿಡಿ ಸೇವೆ ಆರಂಭಗೊಂಡಿರುವುದಾಗಿ ವೈದ್ಯರ ಸಂಘ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next