Advertisement

ಹಣ ಪಡೆದು ವಾಹನಗಳ ಸಂಚಾರಕ್ಕೆ ಅನುಮತಿ : ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ

05:04 PM Jul 30, 2021 | Team Udayavani |

ಸಕಲೇಶಪುರ: ಭೂಕುಸಿತದಿಂದ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ಕೆಲವರು ಹಣ ಪಡೆದು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆಂದು ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ತಾಲೂಕಿನ ದೋಣಿಗಾಲ್ ಸಮೀಪ ಸಂಘಟನೆ ವತಿಯಿಂದ ವಾಹನಗಳನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು ರಾಷ್ಟ್ರೀಯ  ಹೆದ್ದಾರಿ 75  ರಸ್ತೆಯಲ್ಲಿ  ಬೇಲಿಯೆ ಎದ್ದು ಹೊಲ ಮೇಯ್ದಂತೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ದೋಣಿಗಲ್ ಸಮೀಪ ಡಾಂಬರ್ ರಸ್ತೆ ಕುಸಿತದಿಂದಾಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೂ ಟ್ಯಾಂಕರ್ ಹಾಗೂ ಸಿಮೆಂಟ್ ಲಾರಿಗಳ ಚಾಲಕರಲ್ಲಿ ಹಣ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಹಲವು ಅಧಿಕಾರಿಗಳು ಇದರಲ್ಲಿ ಶಾಮೀಲು ಆಗಿದ್ದಾರೆ ಎಂದು ಆರೋಪಿಸಿದರು‌.

ಭಾರಿ ವಾಹನಗಳ ಸಂಚಾರದಿಂದ ಮತ್ತೆ ಭೂಕುಸಿತವಾಗಿ ದುರಸ್ತಿ ಕಾಮಗಾರಿ ವಿಳಂಬವಾಗುವ ಸಾಧ್ಯತೆಯಿದೆ. ಭಾರಿ ವಾಹನಗಳ ಸಂಚಾರಕ್ಕೆ ಕಡ್ಡಾಯವಾಗಿ ನಿಷೇಧ ಹೇರಬೇಕು. ಒಂದು ವೇಳೆ ಹಣ ಪಡೆದು ಮತ್ತೊಮ್ಮೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಕರವೇ ಪ್ರವೀಣ್ ಶೆಟ್ಟಿ ಬಣದ  ಪ್ರಧಾನ ಕಾರ್ಯದರ್ಶಿ ಹರೀಶ್ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next