Advertisement

ಶಿಥಿಲಾವಸ್ಥೆಯಲ್ಲಿ ಕರ್ಚಖೇಡ ಸರ್ಕಾರಿ ಶಾಲೆ

02:57 PM Jul 25, 2022 | Team Udayavani |

ಚಿಂಚೋಳಿ: ತಾಲೂಕಿನ ಕರ್ಚಖೇಡ ಗ್ರಾಮದ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಮಳೆಯಿಂದ ಸೋರಿಕೆಯಾಗುತ್ತಿದ್ದು, ಅಪಾಯ ಸಂಭವಿಸುವ ಮುನ್ನ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಆಗ್ರಹಿಸಿದ್ದಾರೆ.

Advertisement

ಹಿರಿಯ ಮುಖಂಡ ಗುಮಡಾರೆಡ್ಡಿ ಪಾಟೀಲ ಬೇಡಿಕೆಯಂತೆ ಆಗಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ 1966ರಲ್ಲಿ ಐದು ಕೋಣೆಗಳುಳ್ಳ ಈ ಶಾಲೆ ಪ್ರಾರಂಭಿಸಿದ್ದರು. ಆನಂತರ ವರ್ಷಗಳಲ್ಲಿ ಈ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ಸದ್ಯ ಈ ಶಾಲೆಯಲ್ಲಿ 1ರಿಂದ 8ನೇ ತರಗತಿ ನಡೆಯುತ್ತಿದೆ. 250 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಕ್ಕಳಿಗೆ ನೆಲದ ಮೇಲೆ ಕುಳಿತುಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರಾದ ಸಂಗಾರೆಡ್ಡಿ ಪಾಟೀಲ, ಸಲೀಮಪಾಶಾ, ಚಾಂದಪಾಶಾ, ಮಾಡಿಕರೆಡ್ಡಿ ಪಾಟೀಲ ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ನೂತನ ಕಟ್ಟಡ ನಿರ್ಮಿಸಲು ಕೈಗೊಂಡಿದ್ದ ಪ್ರತಿಭಟನೆ ವೇಳೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಘೇರಾವ್‌ ಹಾಕಲಾಗಿತ್ತು. ಈ ವೇಳೆ ತಹಶೀಲ್ದಾರ್‌ ಅಂಜುಮ ತಬಸುಮ, ಬಿಇಒ ರಾಚಪ್ಪ ಭದ್ರಶೆಟ್ಟಿ, ಸಿಪಿಐ ಜಗದೀಶ ಕೆ.ಜಿ ನೂತನ ಶಾಲಾ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಭರವಸೆ ಇನ್ನೂ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next