Advertisement

ಶ್ರೀರಂಗಪಟ್ಟಣ: ಕಾರಿಗೆ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

02:12 PM Oct 23, 2020 | keerthan |

ಮಂಡ್ಯ: ಕಾರಿನಲ್ಲಿ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಯುವಕನನ್ನು ಕೊಲೆಗೈದ ಘಟನೆ ಶ್ರೀರಂಗಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ.

Advertisement

ಪಾಲಹಳ್ಳಿ ಗ್ರಾಮದ ಕಳಪಚ್ಚಿ ಹರೀಶ (30) ಕೊಲೆಯಾದ ವ್ಯಕ್ತಿ. ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿ-ಕೆಆರ್ ಎಸ್ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ರಾತ್ರಿ ಹರೀಶ್ ಕಾರಿನಲ್ಲಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಹಳೇ ವೈಷ್ಯಮ್ಯದಿಂದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

Advertisement

ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next