Advertisement

Karkala ತರಕಾರಿ ಅಂಗಡಿಗೆ ನುಗ್ಗಿದ ಕಾರು

12:01 AM Aug 16, 2023 | Team Udayavani |

ಕಾರ್ಕಳ: ಬೈಲೂರು ಪೇಟೆಯ ಮುಖ್ಯರಸ್ತೆಯಲ್ಲಿರುವ ತರಕಾರಿ ಅಂಗಡಿಗೆ ಕಾರೊಂದು ನಿಯಂತ್ರಣ ತಪ್ಪಿ ನುಗ್ಗಿದ ಘಟನೆ ಆ. 15ರಂದು ಸಂಜೆ ಸಂಭವಿಸಿದೆ.

Advertisement

ಬೆಂಗಳೂರಿನಿಂದ 4 ಮಂದಿ ಯುವಕರು ಕಾರಿನಲ್ಲಿ ಮಲ್ಪೆಗೆ ಕಾರ್ಕಳ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬೈಲೂರು ಪೇಟೆಗೆ ತಲುಪಿದಾಗ ಈ ಘಟನೆ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಲಕನ ಅತೀ ವೇಗ ಹಾಗೂ ಬೇಜವಾಬ್ದಾರಿ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ. ಕಾರು ಢಿಕ್ಕಿ ಹೊಡೆದ ರಭಸಕ್ಕೆ ತರಕಾರಿ ಅಂಗಡಿಯ ಗೋಡೆ ಮಗುಚಿದೆ.

 

Advertisement

Udayavani is now on Telegram. Click here to join our channel and stay updated with the latest news.

Next