Advertisement

Karkala; ಹೊಟೇಲ್‌ ಕಟ್ಟಡದಲ್ಲಿ ಬೆಂಕಿ ಅವಘಡ

12:45 AM Mar 04, 2024 | Team Udayavani |

ಕಾರ್ಕಳ: ಕಸಬಾ ಗ್ರಾಮದ ಕರಿಯಕಲ್ಲು ಜಂಕ್ಷನ್‌ ಬಳಿ ನಿರ್ಮಲ ರಾವ್‌ ಮಾಲಕತ್ವದ ಹೊಟೇಲ್‌ ಕಟ್ಟಡಕ್ಕೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದ ಘಟನೆ ಮಾ.3ರಂದು ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದೆ.

Advertisement

ಘಟನೆಯಿಂದ ಫ್ರಿಡ್ಜ್, ಗ್ರೈಂಡರ್, ಮಿಕ್ಸಿ, ಅಡುಗೆ ಪಾತ್ರೆ, ದಿನಸಿ ಸಾಮಗ್ರಿ, ವಿದ್ಯುತ್‌ ಸಂಪರ್ಕ ಇತ್ಯಾದಿ ಸುಟ್ಟು ಹೋಗಿವೆ. ಕಟ್ಟಡದ ಮೇಲ್ಛಾವಣಿ ಭಾಗಶಃ ಸುಟ್ಟು ಹೋಗಿದೆ.

ಅಗ್ನಿಶಾಮಕದಳದ ಸಿಬಂದಿ ಆಗಮಿಸಿ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಸುಮಾರು 1.20 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next