Advertisement

Karkala ಮಾನಸಿಕ ಖಿನ್ನತೆ: ವ್ಯಕ್ತಿ ಆತ್ಮಹತ್ಯೆ

10:06 PM Aug 22, 2023 | Team Udayavani |

ಕಾರ್ಕಳ: ಕಳೆದ 10 ವರ್ಷಗಳಿಂದ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೈದ ಘಟನೆ ಸಂಭವಿಸಿದೆ.

Advertisement

ದಿ| ಹರಿಶ್ಚಂದ್ರ ಆಚಾರ್ಯ ಅವರ ತಮ್ಮ ಸಂತೋಷ (41) ಆತ್ಮಹತ್ಯೆ ಮಾಡಿಕೊಂಡವರು. ಮದುವೆಯಾಗದ ಬೇಸರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯ ಕೋಣೆಯಲ್ಲಿರುವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ
ಕಾರ್ಕಳ: ಪೋಕ್ಸೋ ಪ್ರಕರಣದ ಆರೋಪಿಯೋರ್ವ ಉಡುಪಿಯ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಸೋದರ ಮಾವ ಸಾಧಿಕ್‌ ಅವರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಕ್ಕುಂದೂರು ಗ್ರಾಮದಲ್ಲಿ ಸಂಭವಿಸಿದೆ.

ಅಬ್ದುಲ್‌ ಅವರ ಮಗ ಮಹಮ್ಮದ್‌ ಯಾಸೀನ್‌ ಆತ್ಮಹತ್ಯೆಗೈದವರು. ಆತ ತನ್ನ ಮನೆಯ ಪಕ್ಕದಲ್ಲಿರುವ ಸೋದರ ಮಾವ ಸಾಧಿಕ್‌ ಅರ ಮನೆಯಲ್ಲಿ ಹಾಸಿಗೆ ತಯಾರಿಸುವ ಕೆಲಸ ಮಾಡಿಕೊಂಡಿದ್ದರು. ಆ. 21ರಂದು ನ್ಯಾಯಾಲಯಕ್ಕೆ ಹೋಗಿ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರರು ಮನೆಯ ಬಾಗಿಲು ಒಡೆದು ಯಾಸೀನ್‌ನನ್ನು ಕೆಳಗಿಳಿಸಿ ಆಸ್ಪತ್ರೆಗೆ ಕೊಂಡೊಯ್ದರೂ ಆಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next