Advertisement

ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ

01:25 AM Feb 08, 2023 | Team Udayavani |

ಕಾರ್ಕಳ: ಮಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದಿದೆ.

Advertisement

ಹೆಪೆಜಾರು ನಿವಾಸಿ ಲಲಿತಾ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ ದನ ಕಟ್ಟುವಾಗ ಅಕಸ್ಮಿಕವಾಗಿ ಬಿದ್ದು, ಎಡಕಾಲು ಜಖಂಗೊಂಡಿತ್ತು.

ಕಾಲಿಗೆ ಚಿಕಿತ್ಸೆ ಪಡೆದಿದ್ದರೂ ಅವರಿಗೆ ಸರಿಯಾಗಿ ನಡೆದಾಡಲು ಆಗದೇ ಇದ್ದು, ಜತೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಪಡೆದರೂ ಕಾಯಿಲೆ ಗುಣಮುಖವಾಗಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದು ಅವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಚ್ಚಲು ಮನೆಯ ಮಾಡಿನ ಜಂತಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next