Advertisement

ಬೆಳ್ಮಣ್‌: ತಮ್ಮನ ಮನೆಗೆ ಬೆಂಕಿ ಇಟ್ಟು ಕಾರಿನೊಳಗೆ ಸಜೀವ ದಹನನಾದ ಅಣ್ಣ

08:18 AM Jan 26, 2023 | Team Udayavani |

ಬೆಳ್ಮಣ್‌ : ತಮ್ಮನ ಮನೆಗೆ ಕೊಳ್ಳಿಯಿಟ್ಟು ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಜ. 25 ರ ಬುಧವಾರ ತಡರಾತ್ರಿ ನಡೆದಿದೆ.

Advertisement

ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಬರ್ಬರ ಕೃತ್ಯ ಎಸಗಿದ ವ್ಯಕ್ತಿ.

ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ.

ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಅಗ್ನಿಶಾಮಕ ದಳದವರ ಸಹಿತ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next