Advertisement

ಕಾರ್ಕಳ: ಸಿಡಿಲು ಬಡಿದು ಸಾವು; ಕುಂದಾಪುರದಲ್ಲಿ ಧಾರಾಕಾರ ಮಳೆ

02:36 AM Nov 16, 2021 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಳೆ ದೂರವಾಗಿದ್ದು, ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಉಡುಪಿ ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದರೆ ಕುಂದಾಪುರ ಪರಿಸರದಲ್ಲಿ ಧಾರಾಕಾರ ಮಳೆ ಸುರಿದಿದೆ. ಕಾರ್ಕಳದ ಬೈಲೂರು ಸಮೀಪದ ನೀರೆ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

Advertisement

ದ.ಕ. ಜಿಲ್ಲೆಯಲ್ಲಿ ರವಿವಾರ ಸಂಜೆ ಆರಂಭವಾಗಿದ್ದ ಮಳೆ ತಡ ರಾತ್ರಿವರೆಗೂ ಸುರಿದಿತ್ತು. ಆದರೆ ಸೋಮವಾರ ಹಗಲಿನಲ್ಲಿ ಮಳೆ ಸುರಿದಿಲ್ಲ. ಸಂಜೆ ಬಳಿಕ ಗ್ರಾಮಾಂತರ ಪ್ರದೇಶಗಳ ಕೆಲವು ಕಡೆ ಸಾಧಾರಣ ಮಳೆಯಾಗಿದೆ.

ಈ ನಡುವೆ ಹವಾಮಾನ ಇಲಾಖೆಯು ಮಂಗಳವಾರ ಕೂಡ ಕರಾವಳಿಯಲ್ಲಿ ಆರೆಂಜ್‌ ಆಲರ್ಟ್‌ ಘೋಷಿಸಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕುಂದಾಪುರ: ಧಾರಾಕಾರ ಮಳೆ
ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವರ್ಷಧಾರೆ ಮುಂದುವರಿದಿದ್ದು, ರವಿವಾರ ತಡರಾತ್ರಿ, ಸೋಮವಾರ ಹಗಲು ಹಲವೆಡೆ ಮಳೆ ಸುರಿದಿದೆ. ಕುಂದಾಪುರ ಭಾಗದಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆ ಸುರಿದಿದ್ದು, ಮಧ್ಯಾಹ್ನ ಬಳಿಕ ತೆಕ್ಕಟ್ಟೆ, ಬೈಂದೂರು, ಉಪ್ಪುಂದ, ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿ ಹೊಳೆ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಅಮಾಸೆಬೈಲು, ಕೊಲ್ಲೂರು ಪರಿಸರದಲ್ಲಿ ಧಾರಾಕಾರ ಮಳೆಯಾಗಿದೆ. ಈ ಭಾಗದಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳಿಗೆ ಹೆಚ್ಚು ಹಾನಿ ಸಂಭವಿಸಿದೆ. ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಪಡುಬಿದ್ರಿ, ಕಾರ್ಕಳ, ಅಜೆಕಾರು, ಬೈಲೂರು, ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.

ಇದನ್ನೂ ಓದಿ:ಆದಿವಾಸಿಗಳ ನಿರ್ಲಕ್ಷಿಸಿದ್ದ ಕಾಂಗ್ರೆಸ್‌: ಪ್ರಧಾನಿ ಮೋದಿ ಆರೋಪ

Advertisement

ಸಿಡಿಲು ಬಡಿದು ಸಾವು
ಕಾರ್ಕಳ: ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ 4ರ ವೇಳೆಗೆ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು.

ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್‌ ಪರಿಕರಗಳು ಸುಟ್ಟು ಕರಕಲಾಗಿವೆ. ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಇತರ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ.

ಸಿಡಿಲು ಬಡಿದು ನೆಲಕ್ಕೆ ಬಿದ್ದ ವಾದಿರಾಜ ಆಚಾರ್ಯ ಅವರನ್ನು ಕೂಡಲೇ ಬೈಲೂರಿನ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್‌ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್‌ ಭಟ್‌ ಇನ್ನಿತರರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next